ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ಸಾಧ್ಯ- ಸಚಿವ ಯತೀಂದ್ರ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭ
ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 8:ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಭಾನುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ಲೋಕಮಾತಾ ಅಹಲ್ಯಾಬಾಯಿ ಹೊಳ್ಳರ್ 301ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಹಲ್ಯಾಬಾಯಿ ಹೋಳ್ಕರ ಶ್ರೇಷ್ಠ ಮಹಿಳೆ. ಅಪ್ರತಿಮ ಹೋರಾಟಗಾರ್ತಿ. ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದರು ಎಂದರು.ಸಮಾಜದ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ. ಹೀಗಾಗಿ ನಾವು ನಮ್ಮ…


