ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ನಗರದ ಚಪ್ಪರಬಂದ್ ಗಲ್ಲಿಯಲ್ಲಿ 36 ವರ್ಷದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಮೃತನನ್ನು ಉಮರಸಾಬ್ ಪಟೇಲ್ (36) ಎಂದು ಗುರುತಿಸಲಾಗಿದೆ. ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಸ್ಕ್ರೂ (ಚೂಪಾದ ಕಬ್ಬಿಣದ ವಸ್ತು) ಬಳಸಿ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.ಉಮರಸಾಬ್ ಶನಿವಾರ ರಾತ್ರಿ ತನ್ನ ಕೆಲ ಗೆಳೆಯರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಇದೇ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಜಗಳಕ್ಕೆ…

Read More

ವಿಜಯಪುರದಲ್ಲಿ ಆಟೋ ಚಾಲಕನ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 20:ನಗರದ ಬಂಜಾರ ಕ್ರಾಸ್ ಸಮೀಪ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಹತ್ಯೆಯಾದ ವ್ಯಕ್ತಿಯನ್ನು ಖಾಜಾ ಅಮೀನ್ ದರ್ಗಾ ನಿವಾಸಿ ಹಾಗೂ ಆಟೋ ಚಾಲಕರಾಗಿದ್ದ ವಿಲಾಸ ನಡುವಿನಮನಿ (30) ಎಂದು ಗುರುತಿಸಲಾಗಿದೆ. ಕುಟುಂಬದ ನಿರ್ವಹಣೆಗಾಗಿ ಆಟೋ ಚಾಲನೆ ಮಾಡುತ್ತಿದ್ದ ವಿಲಾಸ ಅವರು ಬಂಜಾರ ಕ್ರಾಸ್ ಪ್ರದೇಶದಲ್ಲಿ ಇದ್ದ ವೇಳೆ ದುಷ್ಕರ್ಮಿಗಳ ದಾಳಿಗೆ ಗುರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವಿಲಾಸ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ…

Read More