ಸುಳ್ಳು ಫೈರಿಂಗ್ ಪ್ರಕರಣ ಬಯಲು – ದೂರುದಾರ ಸೇರಿ ಮೂವರ ಬಂಧನ
ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 19:ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಫೈರಿಂಗ್ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ದೂರುದಾರನೇ ಸುಳ್ಳು ಕಥೆ ಸೃಷ್ಟಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಜೂ. 3ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 255/2026 ದಾಖಲಿಸಲಾಗಿತ್ತು. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ದಯವಂತ ಡೇರೆ ಅವರು, ತೊರವಿ ಗ್ರಾಮದ ಹದ್ದಿಯಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಮುಖ ಮುಚ್ಚಿಕೊಂಡು ಬಂದು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು…


