ಸುಳ್ಳು ಫೈರಿಂಗ್ ಪ್ರಕರಣ ಬಯಲು – ದೂರುದಾರ ಸೇರಿ ಮೂವರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 19:ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಫೈರಿಂಗ್ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ದೂರುದಾರನೇ ಸುಳ್ಳು ಕಥೆ ಸೃಷ್ಟಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಜೂ. 3ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 255/2026 ದಾಖಲಿಸಲಾಗಿತ್ತು. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ದಯವಂತ ಡೇರೆ ಅವರು, ತೊರವಿ ಗ್ರಾಮದ ಹದ್ದಿಯಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಮುಖ ಮುಚ್ಚಿಕೊಂಡು ಬಂದು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು…

Read More

ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ನಿರ್ಧಾರ :ಯತ್ನಾಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:ಗುರುವಾರ (ಮೇ 21) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. 2022 ರಲ್ಲಿ ಸದರಿ ದರ್ಗಾದಲ್ಲಿ ದೊಡ್ಡ ಮಟ್ಟದ ಗಲಾಟೆಯಾಗಿ, ತಿಳಿಗೇಡಿಗಳು ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿದ್ದರು.ಆರೋಪಿತರು ‘ಅಮಾಯಕರು’ ಎಂದು ಬಿಂಬಿಸುತ್ತಿರುವ ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ. ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಉದ್ದೇಶಪೂರ್ವಕವಾಗಿ ದೊಂಬಿ, ಹಿಂಸಾಚಾರ, ಕೋಮು ಗಲಭೆ, ವಿಗ್ರಹ…

Read More

ಕಳ್ಳತನ ಹಾಗೂ ಸುಲಿಗೆ ಪ್ರಕರಣ: 42 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26 :ಜಿಲ್ಲೆಯ ಇಂಡಿ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 42 ಆರೋಪಿಗಳನ್ನು ಬಂಧಿಸಿ ಸುಮಾರು ₹1,20,04,750 ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಸೇರಿದಂತೆ ವಿವಿಧ ಕಳವು ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ವಿಶೇಷ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಒಟ್ಟು 20 ವಿವಿಧ ಸ್ವತ್ತಿನ ಪ್ರಕರಣಗಳನ್ನು…

Read More

ಚಡಚಣ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ: ಪತ್ತೆಯಾದ ಬ್ಯಾಗ್ ನಲ್ಲಿ 6.55 ಕೆಜಿ ಚಿನ್ನಾಭರಣ, 41.4 ಲಕ್ಷ ನಗದು ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19:ಚಡಚಣ ಎಸ್‌ಬಿ‌ಐ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರರು ಮಹಾರಾಷ್ಟ್ರದ ಹುಲಿಜಂತಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಬಚ್ಚಿಟ್ಟಿದ್ದ ಬ್ಯಾಗ್ ನಲ್ಲಿ 6.55 ಕೆಜಿ ಚಿನ್ನಾಭರಣ ಹಾಗೂ 41.4 ಲಕ್ಷ ರೂಪಾಯಿ ದೊರೆತಿದೆ.ದರೋಡೆಕೋರರು ಚಿನ್ನಾಭರಣ, ನಗದು ಇರುವ ಬ್ಯಾಗ್ ವೊಂದನ್ನು ಹುಲಿಜಂತಿ ಗ್ರಾಮದ ಹಾಳು ಬಿದ್ದ ಮನೆ ಮೇಲ್ಛಾವಣಿ ಮೇಲೆ ಬಿಟ್ಟು ಹೋಗಿರುವುದು ಪೊಲೀಸರ ಕೈಗೆ ಸಿಕ್ಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಓರ್ವ ದರೋಡೆಕೋರ ಹಾಳು ಬಿದ್ದಮನೆಯ ಮೇಲ್ಚಾವಣಿ…

Read More

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ಜಿಲ್ಲೆಯ ಅಲಮೇಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 10,69,500 ರೂ. ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಜಪ್ತಿ ಮಾಡಿಕೊಂಡಿದ್ದಾರೆ.ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಶರಣಬಸು ಜಾಲವಾದ, ಪ್ರಕಾಶ ಕಂಬಾರ ಬಂಧಿತ ಆರೋಪಿಗಳು.ಬಂಧಿತ ಆರೋಪಿತರಿಂದ 8,60,000 ಮೌಲ್ಯದ 86 ಗ್ರಾಂ. ಬಂಗಾರದ ಆಭರಣಗಳು,67,000 ಮೌಲ್ಯದ 67 ಗ್ರಾಂ ಬೆಳ್ಳಿ ಆಭರಣ ಹಾಗೂ ರೂ. 1,25,000 ಮೌಲ್ಯದ 5…

Read More

ಮನೆ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11:ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು 65 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಝಂಡಾ ಕಟ್ಟಾ ಜೆ ಎಂ ರೋಡ ಹಳಕೇರಿ ಗಲ್ಲಿ ನಿವಾಸಿ ಸಮೀರ ಇನಾಮದಾರ, ಶಾಪೇಠಿ ಅಪ್ಸರಾ ಟಾಕೀಸ್ ಹತ್ತಿರ ಸುಹಾಗ ಕಾಲನಿ ನಿವಾಸಿ ಹಸನಡೊಂಗ್ರಿ ಮುಲ್ಲಾ, ನಿಸ್ಸಾರ ಮಡ್ಡಿ ನಿವಾಸಿಶಫೀಕ್ ಅಹ್ಮದ ಇನಾಮದಾರ ಬಂಧಿತ ಆರೋಪಿಗಳು.ಆರೋಪಿತರು ಅನುಮಾನಾಸ್ಪದವಾಗಿ ತಿರುಗಾಡುವಾಗ ಹಿಡಿದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ ಒಟ್ಟು ಮೂರು ಜನರು ಸೇರಿಕೊಂಡು ಮನೆಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ….

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More