ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ಸಂಸ್ಥಾಪನ ದಿನಾಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.ಭಾರತಮಾತೆ ಹಾಗೂ ಪಕ್ಷದ ಸಂಸ್ಥಾಪನೆ ಮಾಡಿದ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಕಾರ್ಯಕರ್ತರು ಉತ್ಸಾಹದಿಂದ ಬಿಜೆಪಿ ಪಕ್ಷದ ಧ್ವಜವನ್ನು ಪ್ರದರ್ಶಿಸಿ ದೇಶಾಭಿಮಾನದ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ರಾಷ್ಟ್ರಾಭಿಮಾನವನ್ನೇ ಉಸಿರಾಗಿಸಿಕೊಂಡಿರುವ ಬಿಜೆಪಿ ಇಂದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿದೆ. ಶ್ಯಾಂ ಪ್ರಸಾದ್ ಮುಖರ್ಜಿ, ಪಂ.ದೀನದಯಾಳ ಉಪಾಧ್ಯಾಯ ಅವರಂತಹ ಶ್ರೇಷ್ಠ ಚಿಂತನೆಯ ಸ್ವರೂಪದಲ್ಲಿ ಉದಯಿಸಿದ…


