ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….

Read More

ಹೊಸ ವರ್ಷಾಚರಣೆ:ಬಿಗಿ ಬಂದೋಬಸ್ತ್-ಎಸ್ಪಿ ಲಕ್ಷಣ ನಿಂಬರಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಜಿಲ್ಲೆಯ ವಿಜಯಪುರ ನಗರ, ತಾಲೂಕಾ ಮಟ್ಟದ ಹಾಗೂ ಹೋಬಳಿ ಮಟ್ಟದ ನಗರಗಳಲ್ಲಿ 2026 ರ – ಹೊಸ ವರ್ಷಾಚರಣೆ ಮಾಡುವ ಕಾಲಕ್ಕೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಮುಂಜಾಗ್ರತೆ ವಹಿಸಿ, ಜಿಲ್ಲೆಯ ಎಲ್ಲ ಹೋಟೆಲ್, ಲಾಡ್ಜ್, ರೆಸ್ಟೋರೆಂಟ್ ಹಾಗೂ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟ ಮಾಲೀಕರು, ಮ್ಯಾನೇಜರುಗಳ ಸಭೆ ಕೈಕೊಂಡಿದ್ದು, ಸಭೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಎಲ್ಲ ಅಗತ್ಯ ಮುಂಜಾಗ್ರತೆ ಕ್ರಮ ವಹಿಸುವ ಕುರಿತು ಸೂಚಿಸಿದ್ದಲ್ಲದೇ…

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ‌ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….

Read More