ವಿದ್ಯಾರ್ಥಿಗಳಿಗೆ ಎನ್ಸಿಸಿ ಕಡ್ಡಾಯಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕಾಲ ರಾಷ್ಟ್ರೀಯ ಕೆಡೆಟ್ ದಳ (ಎನ್ಸಿಸಿ) ತರಬೇತಿಯನ್ನು ಕಡ್ಡಾಯಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುವುದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಅಪಘಾತಗಳಿಗೆ…


