ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳರಿಂದ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ನಗರದಲ್ಲಿ ಸೋಮವಾರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.ನಗರದ ವಾರ್ಡ್ ನಂ.33 ರಲ್ಲಿ ಬರುವ ಶಹಾಪೇಟೆ ಲೇಔಟ್ ದಲ್ಲಿ 2025-26ನೇ ಸಾಲಿನ‌ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಿಸಲಾದ ರೂ.10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಬನಶಂಕರಿ ದೇವಸ್ಥಾನದ ಆವರಣದಲ್ಲಿ 2025-26ನೇ ಸಾಲಿನ‌ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ…

Read More

ನಾಗಠಾಣ: ವಿಶೇಷ ಸಾಧಕ ಮಕ್ಕಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ವಿಶೇಷ ಸಾಧಕ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಕೆಳದಿ ಚನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 1 ನೇ ವರ್ಗದ ವಿದ್ಯಾರ್ಥಿನಿಯರಾದ ಕು.ಅನುಶ್ರೀ ಹಾಗೂ ಕು.ಶ್ರೀನಿಧಿ ಬಂಡೆ ಮತ್ತು ಅರೇಬಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಫಲಕನಾಜ ಶಹರ ಅವರನ್ನು ಶಾಲೆಯ ವತಿಯಿಂದ…

Read More

ನಂಜನಗೂಡು ಮಠದಲ್ಲಿ ಆರಾಧನೆ ಪ್ರಯುಕ್ತ ಆ.೫ರಿಂದ ಪ್ರವಚನ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 3: ಶ್ರೀ ಗುರುಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಆ..೫ ರಿಂದ ೯ ರ ವರೆಗೆ ಶ್ರೀ ಗುರುರಾಯರ ಮಹಿಮೆ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.ಪಂಡಿತ ಡಾ. ಕೃಷ್ಣಾಚಾರ್ಯ ಕಾಖಂಡಕಿ ಅವರು ಪ್ರತಿದಿನ ಸಂಜೆ ೬ ಗಂಟೆಯಿಂದ ೭ ಗಂಟೆ ವರೆಗೆ ಶ್ರೀಮಠದಲ್ಲಿ ಪ್ರವಚನ ಹೇಳಲಿದ್ದಾರೆ.ಸದ್ಭಕ್ತರು ಪ್ರವಚನದ ಲಾಭ ಪಡೆದುಕೊಳ್ಳುವಂತೆ ಶ್ರೀಮಠದ ವಿಚಾರಣಾಕರ್ತಾ ಗೋಪಾಲ ನಾಯಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More