ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ಬಾದ್ಮಿ ಅಮಾವಾಸ್ಯೆ ನಿಮಿತ್ತ ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ ಬಹು ವಿಜೃಂಭಣೆಯಿಂದ ಜರುಗಿದ್ದು, ದೇವಿಯ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.ಶುಕ್ರವಾರ ಸಂಜೆ ಭಕ್ತ ಮಹಿಳೆಯರು ಅಂಬಲಿ ಬಿಂದಿಗೆ ಹೊತ್ತು, ಬಾಸಿಂಗ, ಕಳಸದ ಮೆರವಣಿಗೆಯು ಗುಡಿ ತಲುಪಿ, ಅಲ್ಲಿ ಎಲ್ಲರೂ ಅಂಬಲಿ ಅರ್ಪಿಸಿ, ಪುನೀತರಾದರು.ಚೌಡೇಶ್ವರಿ ದೇವಿಯ ಮುಖವಾಡ ಹೊತ್ತವರು ಅಪಾರ ಸಂಖ್ಯೆಯ ಭಕ್ತರು, ಬಾಜಾ-ಭಜಂತ್ರಿ, ಡೊಳ್ಳು ವಾದ್ಯಗಳು ಹಾಗೂ ಭಕ್ತರ ಜಯಘೋಷಗಳೊಂದಿಗೆ ಇಡೀ ಗ್ರಾಮದ ಭಕ್ತರ ಮನೆ ಮನೆಗೆ…


