ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ:2.92 ಲಕ್ಷ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಗುರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಲಸಿಕಾ ಅಭಿಯಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಮುಖವಾಗಿ 5 ವರ್ಷದೊಳಗಿನ ಒಟ್ಟು 2,92,495 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ…

Read More

ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನ ಆಚರಿಸಿದ ನಾಗಠಾಣದ ಚಿಣ್ಣರು

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಪ್ರತಿವರ್ಷ ಜೂನ್ 10 ರಂದು ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 2 ನೇ ವರ್ಗದ ವಿದ್ಯಾರ್ಥಿಗಳಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಪೆನ್ನುಗಳನ್ನು ಪ್ರದರ್ಶಿಸಿ ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನವನ್ನು ಆಚರಿಸಿದರು.ವಿದ್ಯಾರ್ಥಿ, ಶಿಕ್ಷಕ, ಕವಿ ಮತ್ತು ಬರಹಗಾರರಿಗೆ ಪೆನ್ನು ಅತ್ಯಂತ ಮುಖ್ಯ ವಸ್ತುವಾಗಿದೆ. ಪೆನ್ನು ಒಬ್ಬರ ಭಾವನೆಗಳು, ದೃಷ್ಟಿಕೋನಗಳು ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಹಾಯ ಮಾಡುವ ಪ್ರಮುಖ ಸಾಧನವಾಗಿದೆ. ಇದು ಭಾವನೆಗಳನ್ನು…

Read More

ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ಸಾಧ್ಯ- ಸಚಿವ ಯತೀಂದ್ರ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 8:ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಭಾನುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ಲೋಕಮಾತಾ ಅಹಲ್ಯಾಬಾಯಿ ಹೊಳ್ಳರ್ 301ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಹಲ್ಯಾಬಾಯಿ ಹೋಳ್ಕರ ಶ್ರೇಷ್ಠ ಮಹಿಳೆ. ಅಪ್ರತಿಮ ಹೋರಾಟಗಾರ್ತಿ. ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದರು ಎಂದರು.ಸಮಾಜದ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ. ಹೀಗಾಗಿ ನಾವು ನಮ್ಮ…

Read More

ಭಟ್ಕಳ್ ದುರ್ಘಟನೆಯಲ್ಲಿ ಅನಾಥರಾಗಿರುವ 24 ಮಕ್ಕಳಿಗೆ ವಿಶೇಷ ನೆರವು ಕಲ್ಪಿಸಿ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಭಟ್ಕಳ ತಾಲೂಕಿನ ಪಳ್ಳಿಹೊಳೆಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾಗಿ ಹತ್ತು ಜನ ಸಾವಿಗೀಡಾಗಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ದುರ್ಘಟನೆಯಿಂದಾಗಿ 24 ಜನ ಮಕ್ಕಳ ಬದುಕು ಅತಂತ್ರವಾಗಿದೆ. ಈ ಮಕ್ಕಳು ಅನಾಥರಾಗಿದ್ದು, ತಕ್ಷಣ 24 ಮಕ್ಕಳಿಗೆ ಅವರ ಶಿಕ್ಷಣ ಮುಗಿಯುವವರೆಗೆ ವಸತಿಯುತ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮನವಿ ಮಾಡಿಕೊಂಡಿದ್ದಾರೆ.ಈ…

Read More

ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಶೇ. 90…

Read More

ಮಕ್ಕಳು ದೇಶದ ಆಸ್ತಿ, ಅವರನ್ನು ಪ್ರೀತಿಯಿಂದ ಬೆಳೆಸಿ-ಮೇಜರ್ ಎಸ್.ಸಿ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ,ಮೇ. 7 : “ಮಕ್ಕಳನ್ನು ಕೇವಲ ಒಳ್ಳೆಯ ಶಾಲೆಗೆ ಸೇರಿಸಿದರೆ ಪಾಲಕರ ಜವಾಬ್ದಾರಿ ಮುಗಿಯುವುದಿಲ್ಲ. ಅವರ ದೈನಂದಿನ ಚಟುವಟಿಕೆಗಳನ್ನು ಗಮನಿಸಿ, ಅವರಲ್ಲಿ ನಾಗರಿಕ ಪ್ರಜ್ಞೆ ಹಾಗೂ ಸಂಸ್ಕಾರ ಬೆಳೆಸುವುದು ತಂದೆ-ತಾಯಂದಿರ ಆದ್ಯ ಕರ್ತವ್ಯವಾಗಿದೆ,” ಎಂದು ಮೇಜರ್ ಎಸ್ ಸಿ ಆನಂದ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ, ಶಾಂತಿ ಕುಟೀರ ಟ್ರಸ್ಟ್ ಹಾಗೂ ಶ್ರೀಶೈಲೇಶ್ವರ ವಿದ್ಯಾಕೇಂದ್ರ ಸಂಡೂರು ಮತ್ತು ಭಾರತೀಯ ಸುರಾಜ್ಯ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಶೈಕ್ಷಣಿಕ…

Read More

ಮಕ್ಕಳು ಶಾಲೆಯಿಂದ‌‌ ಹೊರಗುಳಿಯದಂತೆ‌ ನೋಡಿಕೊಳ್ಳಿ: ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಜೀವನದಲ್ಲಿ ಸಾಧನೆ ಮಾಡುವಂತೆ‌ ಅಧಿಕಾರಿಗಳು‌ ಮಕ್ಕಳಿಗೆ ಪ್ರೇರೆಪಿಸುವ ಮೂಲಕ ಪೋಷಕರಿಗೆ ಅರಿವು ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚಿಸಿದರು.‌ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ‌ ಕುರಿತು ಪೋಷಕರಿಗೆ ತಿಳಿ ಹೇಳುವ ಮೂಲಕ ಶಿಕ್ಷಣದ ಮಹತ್ವವನ್ನು‌ ತಿಳಿಸಬೇಕು. ತನ್ಮೂಲಕ‌ ಮಕ್ಕಳು…

Read More

ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More

ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು-ಶಶಿಧರ ಕೋಸಂಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.12: ಮಕ್ಕಳು ಶಾಲಾ ಹಂತದಲ್ಲಿಯೇ ವಿಷಯ ಗ್ರಹಿಕೆಗೆ ಪ್ರತಿಯೊಂದನ್ನು ಪ್ರಶ್ನಿಸುವ ಮುಕ್ತ ಅವಕಾಶ ಇರುವುದರಿಂದ ಎಲ್ಲ ಅರಿಯಬೇಕೆಂಬ ಎಂಬ ಕುತೂಹಲಿಗಳಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಭೆ ಅವರು ಹೇಳಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ…

Read More

ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿ-ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್,ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜ. 1 ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ…

Read More