ಸ್ವಯಂ ಗಣತಿ ಮಾಡಿಕೊಳ್ಳಲು ನಾಗರಿಕರಿಗೆ ಮೇಯರ್ ಎಂ. ಎಸ್. ಕರಡಿ ಮನವಿ: ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಮೇಯರ್ ಹಾಗೂ ಉಪ ಮೇಯರ್ ಚಾಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 1:ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯವಾಕ್ಯದಡಿ ದೇಶ ವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ 2027 ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪಮೇಯರ್ ಸುಮಿತ್ರಾ ಜಾಧವ ಬುಧವಾರ ಚಾಲನೆ ನೀಡಿದರು.ಮೇಯರ್ ಮಡಿವಾಳಪ್ಪ ಕರಡಿ ಅವರು ತಮ್ಮ ಸ್ವಯಂ ಗಣತಿ ಮಾಡುವುದರ ಮೂಲಕ ನಗರ ವ್ಯಾಪ್ತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ಕೆ ಚಾಲನೆ ನೀಡಿ, ನಗರದ ಜನತೆ ಸ್ವಯಂ ಗಣತಿ ಮಾಡಿಕೊಳ್ಳಲು ಕರೆ ನೀಡಿದರು.ರಾಷ್ಟ್ರೀಯ…


