ಹೊರ್ತಿ ಗ್ರಾಮದ ಶಿವ ದೇವಾಲಯಕ್ಕೆಸ್ವಚ್ಚತೆಯ ಸ್ಪರ್ಶ
ಸಪ್ತಸಾಗರ ವಾರ್ತೆ, ವಿಜಯಪುರ 25. ಶತಮಾನಗಳ ಪರಂಪರೆಯ ಹೊರ್ತಿ ಗ್ರಾಮದ ಶಿವ ದೇವಾಲಯಕ್ಕೆಸ್ವಚ್ಚತೆಯ ಸ್ಪರ್ಶ ನೀಡಿದ ಗಾನಯೋಗಿ ಸಂಘದ ಸದಸ್ಯರು ಮತ್ತು ಸ್ಥಳೀಯರ ಕಾರ್ಯಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿರುವ ಕ್ರಿ. ಶ. 11ನೇ ಶತಮಾನದ ಚಾಲುಕ್ಯರ ಕಾಲದ ಅಪರೂಪದ ಪ್ರಾಚೀನ ಶಿವ ದೇವಾಲಯವನ್ನು ಗಾನಯೋಗಿ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಶುಕ್ರವಾರ ಸ್ವಚ್ಛಗೊಳಿಸಿದ್ದರು. ಎಲ್ಲರೂ…


