ನಿಮ್ಮ ಜತೆ ಸರ್ಕಾರವಿದೆ, ನೀವು ಸರ್ಕಾರದ ಜತೆ ನಿಲ್ಲಿ- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ.6: “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್ ಅವರು…

Read More

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ…

Read More

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 23: “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.“ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು….

Read More

ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 19:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು…

Read More

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ…

Read More

ವೈದ್ಯರು ಕಣ್ಣಿಗೆ ಕಾಣುವ ದೇವರು: ಜನರ ನಂಬಿಕೆ ಉಳಿಸಿಕೊಳ್ಳಿ-ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.16:“ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು.ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ರಾಜ್ಯಪಾಲರ ಜತೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.“ಈ ವೃತ್ತಿಯಲ್ಲಿ…

Read More

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ 

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.15: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ…

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ. 14:ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ…

Read More

ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 13:ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ, ತಾಲ್ಲೂಕು ಮಟ್ಟದಲ್ಲಿ ರಿಂಗ್ ರಸ್ತೆ ಗ್ರಿಡ್ ನಿರ್ಮಾಣ, ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ, ಯುವ ಯುಗ ಸ್ಥಾಪನೆ, ನಕಲಿ ಫೈನಾನ್ಸ್ ಸ್ಕೀಂ, ರೌಡಿಗಳು ಹಾಗೂ ಡ್ರಗ್ಸ್ ಜಾಲ ನಿಗ್ರಹ, ಗ್ರಾಮೀಣ ಶಿಕ್ಷಣಕ್ಕೆ ಸಿಎಸ್ಆರ್ ನೀತಿ ರಚನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ…

Read More