ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 26: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ…

Read More

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ- ಸಿಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 5 :ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ” ದಲ್ಲಿ ಮಾತನಾಡಿದರು.ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ…

Read More

ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಕೈ ಬಿಡಲು ಒತ್ತಾಯಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಕೈ ಬಿಟ್ಟು ಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿವಿಧ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ಒಂದೇ ವೇದಿಕೆಯಡಿಯಲ್ಲಿ ಹೋರಾಟ ನಡೆಸಲು `ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಈ ಸಮಿತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಈ…

Read More

ಸೆ.6ರಂದು ಆಲಮಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೃಷ್ಣಗೆ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಆಲಮಟ್ಟಿಯ ಲಾಲ್ ಬಹಾದ್ದೂರ್‌ಶಾಸ್ತ್ರಿ ಜಲಾಶಯ ಈಗ ಭರ್ತಿಯಾಗಿದ್ದು, ಹೀಗಾಗಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣಗೆ ಸೆ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್‌ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣೆಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಜನ, ಜಾನುವಾರಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ…

Read More

ಅಂಜನಾದ್ರಿಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿ.ಎಂಸೂಚನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 3:ಅಂಜನಾದ್ರಿ ಬೆಟ್ಟದ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ…

Read More

ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಆ 31:ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ…

Read More

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 31: ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ವಿಧಾನ‌ ಪರಿಷತ್ ಮಾಜಿ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ…

Read More

ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಜೇತ ಕ್ರೀಡಾಪಟುಗಳಿಗೆ ಸಿಎಂ ಅಭಿನಂದನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 21:ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತ ಕ್ರೀಡಾಪಟುಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.ಕ್ರೀಡಾಪಟುಗಳಾದ ವೇಗವಾದ ಸ್ಕೇಟರ್ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜು. 31 :ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರು ಈ ವಿಷಯ ತಿಳಿಸಿದರು.ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

Read More