ಕಾವೇರಿ ನೀರು: ರೈತರ ಹಿತ ಕಾಪಾಡಲು ಸರ್ಕಾರ ದೃಢ ನಿಲುವು ತಾಳಲಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 30:ಕಾವೇರಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ದೃಢ ನಿಲುವು ತಾಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.“ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂಬ ಮಾತನ್ನು ಉಲ್ಲೇಖಿಸಿದ ಯತ್ನಾಳ್, ಕಾವೇರಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಹಾಗೂ…

Read More

ಸಚಿವ ಸಂಪುಟ ವಿಳಂಬಕ್ಕೆ ಸಿಎಂ ವಿರುದ್ಧ ಯತ್ನಾಳ ತೀವ್ರ ವಾಗ್ದಾಳಿ

‘ಎಲ್ಲ ಇಲಾಖೆಗಳನ್ನೂ ತಮ್ಮ ಬಳಿಯೇ ಇಟ್ಟುಕೊಳ್ಳಲು ಸಂಪುಟ ವಿಸ್ತರಣೆ ಮುಂದೂಡುತ್ತಿದ್ದಾರೆ; ಬರದ ನಡುವೆಯೂ ಕೃಷಿ ಸಚಿವರಿಲ್ಲ‘ ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಆಗುತ್ತಿರುವ ವಿಳಂಬದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ದೇಶಪೂರ್ವಕವಾಗಿಯೇ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಸಂಪುಟ ವಿಸ್ತರಣೆಯನ್ನು ವಿಳಂಬಗೊಳಿಸುತ್ತಾ ಹೋದರೆ ಹೆಚ್ಚಿನ ಇಲಾಖೆಗಳು…

Read More

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ 22:ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ ಸಂವಾದ”ದಲ್ಲಿ ಮಾತನಾಡಿದರು.ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ…

Read More

ನಮ್ಮ ಸಿಎಂ ಗಟ್ಟಿಯಾಗಿದ್ದಾರೆ- ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ನಮ್ಮ ಸಿಎಂ ಬಹಳ ಗಟ್ಟಿಯಾಗಿದ್ದಾರೆ.ಅವರು ಯಾವಗಲೂ ಎಂದೂ ಅಸಹಾಯಕರಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಭಾನುವಾರ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು, ಸಿಎಂ ಅಸಹಾಯಕರಾಗಿದ್ದಾರೆ ಎಂದುಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಕ್ರಮ ಆಗುತ್ತದೆ. ನಾನು ಸಹ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೂ ನಮ್ಮ ಮೇಲೆ ಕೂಡ ಕ್ರಮವಾಗುತ್ತದೆ. ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯಿಸುತ್ತದೆಎಲ್ಲರೂ ಪಕ್ಷದ ನಿಯಮಗಳನ್ನು…

Read More

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ,ಬೆಂಗಳೂರು, ಏ.18:ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು. ಕೆ….

Read More

ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಏ. 16:ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ಜರುಗಿತು.ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ…

Read More

ಕೇಂದ್ರದ ಕುತಂತ್ರವಿರೋಧಿಸಿ- ಸಿಎಂ ಸಿದ್ದರಾಮಯ್ಯ ರೈತರಿಗೆ ಕರೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 6 : ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಮಹಿಳಾ ಕೃಷಿಕರ ಸಾಧನೆ ಸ್ಪೂರ್ತಿದಾಯಕನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ…

Read More

ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಸಿಎಂ ಅಲ್ಲ, ಕರ್ನಾಟಕದ ಸಿಎಂ: ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ರಾಜ್ಯದ ಸಿಎಂ ಆಗಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ವೇದಿಕೆ ಹಂಚಿಕೆ ಹಾಗೂ ಅವರನ್ನು ಹೊಗಳಿದ ವಿಚಾರವಾಗಿ ಕೇಳಿಬಂದ ಟೀಕೆಗಳಿಗೆ,ಸಿದ್ದರಾಮಯ್ಯ ಅವರು ಕೇವಲ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಲ್ಲ. ಅವರು ಇಡೀ ರಾಜ್ಯದ ಮುಖ್ಯಮಂತ್ರಿ. ನಮ್ಮ ಕ್ಷೇತ್ರಕ್ಕೆ ಬಂದಾಗ ಅವರಿಗೆ ಗೌರವ ನೀಡುವುದು ಶಿಷ್ಟಾಚಾರ ಮತ್ತು ನನ್ನ ಕರ್ತವ್ಯ. ನಾನು ಗೌರವ…

Read More

ಸರ್ಕಾರಿ ಮೆಡಿಕಲ್‌ ಕಾಲೇಜು: ಹೋರಾಟಗಾರರ ಜೊತೆ ಸಭೆ ನಿಗದಿಗೆ ಸಿಎಂಗೆ ಸಚಿವ ಶಿವಾನಂದ ಪಾಟೀಲ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6 : ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಗೆ ಬದಲಾಗಿ ಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಸೆಪ್ಟೆಂಬರ್‌ 18 ರಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರ ಬೇಡಿಕೆ ಆಲಿಸಿ, ಚರ್ಚಿಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಜವಳಿ,‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಶಿವಾನಂದ…

Read More

ಮೈಸೂರು ಅರಮನೆ ಆವರಣದಲ್ಲಿ ನಡೆದ ಅಂಬಾರಿ ಮೆರವಣಿಗೆಯಲ್ಲಿ ನಾಡ ದೇವಿ ಚಾಮುಂಡೇಶ್ವರಿ ದೇವಿಗೆ ಸಿಎಂ, ಡಿಸಿಎಂ ಪುಷ್ಪಾರ್ಚನೆ

ಸಪ್ತ ಸಾಗರ ವಾರ್ತೆ, ಮೈಸೂರು, ಅ. 2: ಮೈಸೂರು ಅರಮನೆ ಆವರಣದಲ್ಲಿ ವಿಜಯ ದಶಮಿ ನಿಮಿತ್ತ ಗುರುವಾರ ಅಭಿಮನ್ಯು ಹೊತ್ತ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು. ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸಚಿವರಾದ ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಯದುವೀರ್ ಒಡೆಯರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಲಕ್ಷೀಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

Read More