ಶಿಕ್ಷಕರ ನೇಮಕಾತಿ ಗೊಂದಲ ನಿವಾರಣೆಗೆ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 14: ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡಬೇಕು ಹಾಗೂ ನೇಮಕಾತಿ ಅಧಿಸೂಚನೆಯಲ್ಲಿರುವ ಗೊಂದಲಗಳನ್ನು ಕೂಡಲೇ ನಿವಾರಿಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪುಜಾರಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಾಲೆಗಳ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಇಂಗ್ಲಿಷ್ ಶಿಕ್ಷಕರ ಹುದ್ದೆಗಳನ್ನು ಸೃಷ್ಟಿಸಿ, ಖಾಲಿ…


