ಬಸವನಬಾಗೇವಾಡಿ ಕ್ಷೇತ್ರಕ್ಕೆ 3 ಕೆ.ಪಿ.ಎಸ್ ಶಾಲೆ ಮಂಜೂರು
ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 : ರಾಜ್ಯ ಸರ್ಕಾರ ರಾಜ್ಯದ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆ.ಪಿ.ಎಸ್.) ಉನ್ನತೀಕರಿಸಿ ಆದೇಶ ಹೊರಡಿಸಿದೆ. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ತವರು ಕ್ಷೇತ್ರವಾದ ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರಕ್ಕೂ 3 ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು ಮಾಡಿ ಆದೇಶಿಸಿದೆ.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೊಲ್ಹಾರದ ಸರ್ಕಾರಿ…


