ಬಿಸಿ ಊಟಕ್ಕೆ ಎಣ್ಣೆ, ತೊಗರಿ ಬೇಳೆ ವಿತರಿಸಿ: ಸಿಇಒಗೆ ಮನವಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 28: ಅಕ್ಷರ ದಾಸೋಹ ಯೋಜನೆಯಡಿಶಾಲೆಗಳಲ್ಲಿ ಮಧ್ಯಾಹ್ನ ಬಿಸಿ ಊಟಕ್ಕೆ ಮಕ್ಕಳಿಗೆ ಎಣ್ಣೆ, ತೊಗರಿ ಬೇಳೆ ವಿತರಿಸಬೇಕು. ಮೊಟ್ಟೆಗಳ ಖರೀದಿಮೊತ್ತ ಹೆಚ್ಚಳವಾಗಿದ್ದು, ದರ ಮರುನಿಗದಿಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದಅವರಿಗೆ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ, ಶೈಕ್ಷಣಿಕ ವರ್ಷ ಆರಂಭವಾಗಿ ಜೂನ ತಿಂಗಳು ಮುಗಿಯುತ್ತಾ ಬಂದರೂ ಶಾಲೆಗಳಿಗೆ ಬೇಳೆ ಹಾಗೂ ಎಣ್ಣೆಪೂರೈಕೆಯಾಗಿಲ್ಲ. ಮುಖ್ಯಗುರುಗಳು ಬೇಳೆ ಹಾಗೂ ಎಣ್ಣೆ…


