ನಾಳೆ, ನಾಡಿದ್ದು ಗೋಳಗುಮ್ಮಟದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಮೊದಲ ಹೆಜ್ಜೆಯಾಗಿ ಕಲಾಧಾರಾ ವಿಶೇಷ ಕಾರ್ಯಕ್ರಮ: ಡಾ. ಸುಧಾಮೂರ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3 : ನಮ್ಮ ಸಾಂಸ್ಕೃತಿಕ ವೈಭವವನ್ನು ಪ್ರಪಂಚಾದ್ಯಂತ ಪಸರಿಸುವ ಕೆಲಸ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆಯಾಗಿ ಕಲಾಧಾರಾ ಎಂಬ ವಿಶೇಷ ಕಾರ್ಯಕ್ರಮ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯಸಭೆ ಸದಸ್ಯೆ ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಹೇಳಿದರು.ಶನಿವಾರ ವಿಜಯಪುರ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರ್ವಜನಿಕರ ಸಹಕಾರ ದೊರಕಿದರೆ ಪ್ರತಿ ವರ್ಷವೂ ಈ ಕಾರ್ಯಕ್ರಮವನ್ನು ಸಂಘಟಿಸುವ ಯೋಜನೆ ಹೊಂದಲಾಗಿದೆ ಎಂದರು.ಸಾಂಸ್ಕೃತಿಕ ಭವ್ಯತೆಯ ಪ್ರಸಾರದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,…

Read More

ಗ್ಯಾರಂಟಿ ಯೋಜನೆಗಳ ಕಲಾ ಜಾಥಾ ಪ್ರದರ್ಶನ: ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ…

Read More

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…

Read More

ಗಣಪ ಹೋದ, ಜೋಕುಮಾರ ಬಂದ…

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3: ‘ಅಡ್ಡಡ್ಡ ಮಳಿ ಬಂದು..ದೊಡ್ಡದೊಡ್ಡ ಕೆರೆ ತುಂಬಿ..‌ಗೊಡ್ಡುಗಳೆಲ್ಲ ಹೈನಾಗಿ..ಜೋಕುಮಾರ ಮಳಿ ತಂದ’..ಎಂಬ ಜೋಕುಮಾರನ ಬಗ್ಗೆ ಮಹಿಳೆಯರು ಪದಗಳ ಮೂಲಕ ಹಾಡುತ್ತಾ, ಉತ್ತರ ಕರ್ನಾಟಕದಲ್ಲಿ ಗಣಪತಿ ಹೋದ ಮಾರನೇ ದಿನ ಜನ್ಮ ತಾಳುವ ಜೋಕುಮಾರ ರೈತರ ಪಾಲಿಗೆ ವರವಾಗಿ ಪರಿಣಮಿಸಿದ್ದಾನೆ. ತಾಲೂಕಿನ ನಾಗಠಾಣ ಗ್ರಾಮದಲ್ಲಿ ಬಹಳ ವರ್ಷಗಳಿಂದ ಈ ಜೋಕುಮಾರನ ಹಬ್ಬ ಚಾಲ್ತಿಯಲ್ಲಿದೆ.ಮಳೆಗಾಗಿ ಜೋಕುಮಾರನನ್ನು ನೆನೆದು ಪ್ರಾರ್ಥಿಸುವ ಮಹಿಳೆಯರು ಜೋಕುಮಾರ ಮೂರ್ತಿಯನ್ನು ಏಳು ದಿನಗಳ ಕಾಲ ಗ್ರಾಮದಲ್ಲಿನ ಮನೆ ಮನೆಗೆ ಹೊತ್ತು ಸಂಚರಿಸುತ್ತಾರೆ….

Read More

ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ. ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ…

Read More

ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ‌ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ‌ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ‌,ಗಾಯನ ಪ್ರೇಕ್ಷಕರ…

Read More