ಮಹಿಳಾ ವಿವಿಯಲ್ಲಿ “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕಾರ್ಯಾಗಾರ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಯು.ಜಿ ಬ್ಲಾಕ್ ವತಿಯಿಂದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇದೇ ಡಿ. ೫ ರಂದು “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರವನ್ನು ಕನ್ನಡ ಸಭಾಭವನದಲ್ಲಿ ಆಯೋಜಿಸಲಾಗಿದೆ.ಮಹಿಳಾ…


