ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ನುಡಿ ನಮನ ಕಾರ್ಯಕ್ರಮ
ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 12:ಇಲ್ಲಿನ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ಕಛೇರಿಯಲ್ಲಿ ದಲಿತ ಕವಿ,ಬಂಡಾಯ ಕವಿ ನಾಡೋಜ ಪ್ರಶಸ್ತಿ ಪಡೆದ ಬಡವರ ನಗುವಿನ ಶಕ್ತಿ, ಮಾನಸ ಪುತ್ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿದ್ದಲಿಂಗಯ್ಯನವರ ನುಡಿ ನಮನ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.ಸಿದ್ಧಲಿಂಗಯ್ಯನವರ 5ನೇ ಪುಣ್ಯ ತಿಥಿ ದಿನದ ನಿಮಿತ್ತ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿಕವಿ ಸಿದ್ದಲಿಂಗಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಣ್ಯತಿಥಿ ಆಚರಿಸಲಾಯಿತು.ಜಿಲ್ಲಾ ಅಧ್ಯಕ್ಷ ಬಿ.ಎಚ್. ನಾಡಗಿರಿ ಅವರು ಮಾತನಾಡಿ, ಕನ್ನಡ…


