ಸೆ.10ರಿಂದ ವಿಜಯಪುರದಲ್ಲಿ ಅಗ್ನಿವೀರ ನೇಮಕಾತಿ ರ‍್ಯಾಲಿ : ಸುಗಮ ಹಾಗೂ ಪಾರದರ್ಶಕ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.12:ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ 23ರವರೆಗೆ ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಯನ್ನು ಶಿಸ್ತುಬದ್ಧ, ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರ‍್ಯಾಲಿಯು ಪ್ರತಿದಿನ…

Read More

ತಿಕೋಟ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ…

Read More