ಭೀಮಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆಶಾಸಕ, ಡಿಸಿ ಭೇಟಿ, ಪರಿಶೀಲನೆ: ಸಂತ್ರಸ್ಥರ ಸಮಸ್ಯೆ ಆಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.೨೭: ಭೀಮಾನದಿ ಪ್ರವಾಹಕ್ಕೆ ಒಳಗಾಗಿರುವ ಸಿಂದಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದರು.ಶನಿವಾರ ಭೀಮಾನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಶಾಸಕರು, ಈ…

Read More

ಬೆಳೆ ಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಕೈ ಬಿಟ್ಟುಹೋಗದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು….

Read More

ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.೧೪: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಭಾನುವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಕೆ.ಅನಂದ ಚಾಲನೆ ನೀಡಿದರು.ರಾಜ್ಯದ ರಾಜಧಾನಿಯಲ್ಲಿ ಸೆ.೧೫ರಂದು ಬೃಹತ್ ಕಾರ್ಯಕ್ರಮ ಆಯೊಜಿಸಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಬೈಕ್ ಮೂಲಕ ಪಾಲ್ಗೊಳ್ಳಲಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರತಿನಿಧಿಸುತ್ತಿದ್ದಾರೆ. ಭವ್ಯವಾದ ಪ್ರಜಾಪ್ರಭುತ್ವ ಪಡೆದ ನಾವುಗಳು ಅದರ ಪಾಲನೆಯನ್ನು ಮಾಡುವುದು ಬಹಳ ಅವಶ್ಯ ಇದೆ ಎಂದು…

Read More

ಕೋಟ್ಪಾಕಾಯ್ದೆಪರಿಣಾಮಕಾರಿಅನುಷ್ಠಾನಕ್ಕೆಜಿಲ್ಲಾಧಿಕಾರಿಡಾ. ಆನಂದ.ಕೆಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9:ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದ 2025-26ನೇ ಸಾಲಿನ ಎರಡನೇ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ…

Read More

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.29:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ…

Read More

ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಈಗಾಗಲೇ ಕೈಗೊಳ್ಳಲಾಗಿದ್ದು, ಎರಡು ದಿನಗಳಲ್ಲಿ ಬೆಳೆ ಹಾನಿಯ ಬಗ್ಗೆ ಪೂರ್ಣ ಪ್ರಮಾಣದ ಸಮಗ್ರ ಸಮೀಕ್ಷೆ ವರದಿಯನ್ನು ಸಲ್ಲಿಸುವಂತೆಯೂ. ಈ ಸಮೀಕ್ಷೆಯಲ್ಲಿ ಯಾವೊಬ್ಬ ಅರ್ಹ ರೈತರು ಹೊರ ಉಳಿಯದಂತೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕುರಿತ ಸಭೆ ನಡೆಸಿ, ಮಾತನಾಡಿದ ಅವರು, ಬೆಳೆ…

Read More

ಪರೀಕ್ಷೆಗಳಿಗೆ ಭಯ ಬೇಡ, ಸಿದ್ಧತೆ ಇರಲಿ-ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ‌ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾಗು ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ…

Read More

ಹಾಸ್ಟೆಲ್ ಮೆಂಟರ್ ಗಳ ನೇಮಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ,ಆ. ೨೪:ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್ ಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ.ಜಿಲ್ಲೆಯ ವಿನೂತನ ಅಭಿಯಾನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್ ಈಗಾಗಲೇ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಯಕ್ತಿಕ ಹಾಗೂ ಉಜ್ವಲ ಭವಿಷ್ಯದ ಬೆಳವಣಿಗೆಗಾಗಿ ಮಾರ್ಗದರ್ಶನ ನೀಡುವ…

Read More

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಆನಂದ ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 22: ಆರೋಗ್ಯ ಸೌಕರ್ಯ ಮತ್ತು ವಿವಿಧ ಆರೋಗ್ಯ ಸೌಲಭ್ಯ ಒದಗಿಸಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಸುರಕ್ಷತೆಗೆ ಅಗತ್ಯ ಆರೋಗ್ಯ ತಿಳುವಳಿಕೆ ಮೂಡಿಸಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಿಣಿ…

Read More

ಕಸ ಕಂಡರೆ ಫೋಟೋ ಕಳುಹಿಸಿ ಅಭಿಯಾನ: ಮಾರ್ಗಸೂಚಿಗಳಂತೆ ಕಾರ್ಯ ನಿರ್ವಹಿಸಿ- ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 19: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಡಾವಣೆ, ರಸ್ತೆ ಬದಿ, ಉದ್ಯಾನವನ, ಖಾಲಿ ನಿವೇಶನಗಳಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಸಾರ್ವಜನಿಕರ ಸಹಕಾರದೊಂದಿಗೆ ದೂರು ಸ್ವೀಕರಿಸಿದ 24 ಗಂಟೆಯೊಳಗೆ ವಿಲೇವಾರಿ ಮಾಡಲು ಕಸ ಕಂಡರೆ ಫೋಟೋ ಕಳುಹಿಸಿ ಎಂಬ ಅಭಿಯಾನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಈ ಅಭಿಯಾನದ ಮಾರ್ಗಸೂಚಿಗಳಂತೆ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸೂಚನೆ ನೀಡಿದ್ದಾರೆ.ಕಸ ಕಂಡರೆ ಫೋಟೋ…

Read More