ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ.19:“ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ‌. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.ಅಸ್ಸಾಂ ರಾಜ್ಯಕ್ಕೆ ತೆರಳುವುದಕ್ಕೆ ಮುಂಚಿತವಾಗಿ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು.ಏನಾದರೂ ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ…

Read More

ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 6:ಮುಂದಿನ ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಗುರುವಾರ ಅವರು ಮಾತನಾಡಿದರು.ಇಂದು ಬಿಡಿಎ ಅಧಿಕಾರಿಗಳ ಜತೆ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಉತ್ತರ ಹಾಗೂ ದಕ್ಷಿಣ) ಬಗ್ಗೆ ಪರಿಶೀಲನೆ ಸಭೆ ನಡೆಸಿದೆ. ಇಂದು ಭೂಮಿ ಮಾಲೀಕರಿಗೆ ಪರಿಹಾರದ ಚೆಕ್, ಪ್ರಮಾಣ ಪತ್ರ, ಟಿಡಿಆರ್ ನೀಡಿದ್ದೇನೆ. ಕೆಲವರು ಶೇ.35ರಷ್ಟು ವಾಣಿಜ್ಯ ಭೂಮಿಯನ್ನು ಪರಿಹಾರವಾಗಿ ಪಡೆದರೆ, ಮತ್ತೆ ಕೆಲವರು…

Read More

ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಯಾರಿಗೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಂಗಳೂರು, ಡಿ.28:“ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ…

Read More

ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ. 16:ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ವಿಠಲ ಕಟಕದೊಂಡ ಅವರ ಪ್ರಶ್ನೆಗೆ ಉತ್ತರಿಸಿದರು.ಹೊರ್ತಿ ರೇವಣಸಿದ್ದೇಶ್ವರ ಯೋಜನೆಯ ಎರಡನೇ ಹಂತವನ್ನು ಯಾವಾಗ ಪ್ರಾರಂಭ ಮಾಡುತ್ತೀರಿ ಎಂಬ ವಿಠಲ ಪ್ರಶ್ನೆಗೆ, ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ…

Read More

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಡಿ.2:“ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಉಪಾಹಾರ ಕೂಟದ ಬಳಿಕ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದರು.“ನಾನು ಮುಖ್ಯಮಂತ್ರಿಗಳನ್ನು…

Read More

ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ, ಕಾಂಗ್ರೆಸ್ ಆಸರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತ ಸಾಗರ ವಾರ್ತೆ : ಬೆಂಗಳೂರು, ಅ.02 “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ ಪಕ್ಷವನ್ನು ಕಟ್ಟಿಕೊಳ್ಳುತ್ತಿದೆ. ಆ ಮೂಲಕ ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆಯಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿ

ಸಪ್ತಸಾಗರ ವಾರ್ತೆ, ರಾಮನಗರ, ಸೆ. 27: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಮನಗರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ ಪಿ ಯೋಗೇಶ್ವರ್, ಎಂಎಲ್ಸಿ ಎಸ್ ರವಿ, ಉಪಾಧ್ಯಕ್ಷ ಸೂರಜ್ ರೇವಣ್ಣ, ಮಾಜಿ ಶಾಸಕ, ಗ್ಯಾರಂಟಿ ಸಮಿತಿ…

Read More

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ದೆಹಲಿ, ಸೆ. 21:“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.“ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ…

Read More

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ

ಸಪ್ತಸಾಗರ ವಾರ್ತೆ ರಾಮನಗರ, ಸೆ.19:“ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ…

Read More