ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ; ದೇಶ, ರಾಜ್ಯಕ್ಕೆ ಒಳಿತಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್
ಸಪ್ತಸಾಗರ ವಾರ್ತೆ ತಿರುನಲ್ಲಾರ್ (ತಮಿಳುನಾಡು): ಮೇ 09“ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ. ದೇವರಲ್ಲಿ ಪ್ರಾರ್ಥನೆಗೆ ಇದು ಸೂಕ್ತ ಸಮಯ ಎಂದು ಬಂದಿರುವೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಬೇಡಿಕೊಂಡಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲದ ಭೇಟಿ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.ಟಿವಿಕೆ ಜೊತೆಗಿನ ಮೈತ್ರಿ ಬಗ್ಗೆ ಕೇಳಿದಾಗ, “ಜಾತ್ಯಾತೀತ,…


