ಜಿಬಿಎವ್ಯಾಪ್ತಿಯನೂತನಪಾಲಿಕೆಕಚೇರಿಗಳನಿರ್ಮಾಣಕ್ಕೆನ. 1 ರಂದುಭೂಮಿಪೂಜೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು….

Read More

ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More

ನಾಗರಿಕಸ್ನೇಹಿಸೇವೆ, ಉತ್ತಮಆಡಳಿತ, ಯೋಜನೆಗಳಪರಿಣಾಮಕಾರಿಜಾರಿಗಾಗಿಜಿಬಿಎಅಸ್ತಿತ್ವಕ್ಕೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.2:“ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.“02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ,…

Read More

ಮಹಾರಾಷ್ಟ್ರ ಡಿಸಿಎಂ ಜೊತೆಗೆ ದ್ರಾಕ್ಷಿ ಬೆಳೆ ಸಮಸ್ಯೆ ಕುರಿತು ಕೊಕರೆ ಚರ್ಚೆ

ಸಪ್ತಸಾಗರ ವಾರ್ತೆ, ಪುಣೆ, ಆ. 29:ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಇತ್ತೀಚೆಗೆ ದ್ರಾಕ್ಷಿ ಬೆಳೆಗಾರರ ಸಮಾವೇಶ ಜರುಗಿತು.ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಕೃಷಿ ಮಂತ್ರಿಗಳ ಜೊತೆಗೆ ಭಾರತೀಯ ಕಿಸಾನ್ ಸಂಘದ ಭೀಮಸೇನ ಕೊಕರೆ ಅವರು ದ್ರಾಕ್ಷಿ ಬೆಳೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ದ್ರಾಕ್ಷಿ ಬೆಳೆಗಾರರ ಮುಂದಿನ ಬೆಳವಣಿಗೆಗಳ ಬಗ್ಗೆ ಅದರಲ್ಲೂ ವಿಶೇಷವಾಗಿ ತಳಿಗಳ ಬಗ್ಗೆ ಹಾಗೂ ರಫ್ತಿನ ಕುರಿತು ಮತ್ತು ಭಾರತ ದೇಶಕ್ಕೆ ಹೊರದೇಶದಿಂದ ಕಳಪೆ ಮಟ್ಟದ ಒಣ ದ್ರಾಕ್ಷಿಯ ಕಳ್ಳ ಸಾಗಣೆಯ ಮೂಲಕ ಬರುತ್ತಿರುವುದರ ಬಗ್ಗೆ…

Read More

ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪ ರಾಷ್ಟ್ರಪತಿಗೆ ಈಗ ಅರ್ಥವಾಗಿದೆ- ಸಚಿವ ಲಾಡ್

ಸಪ್ತಸಾಗರ ವಾರ್ತೆ,ವಿಜಯಪುರ,ಜು. 23:ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರಿಗೆ ಈಗ ಗೊತ್ತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿಪ್ರಜಾಪ್ರಭುತ್ವ ಇಲ್ಲ ಎಂದುಉಪರಾಷ್ಟ್ರಪತಿಗಳಿಗೆ ಅದು ಈಗ ಅರ್ಥವಾಗಿದೆ ಎಂದರು.ಈ ದೇಶದ ವ್ಯವಸ್ಥೆಯಲ್ಲಿ ಯಾಕೆ ರಾಜೀನಾಮೆ ಕೊಡಿಸಿದರು.ಅವರಿಗೆ ಒತ್ತಡ ಯಾಕೆ ಬಂದಿದೆ.ಸ್ವ ಇಚ್ಛೆಯಿಂದ ಯಾಕೆ ರಾಜೀನಾಮೆ ಕೊಟ್ಟರು ಎಂದು ಬಿಜೆಪಿಯವರನ್ನು ಕೇಳಬೇಕು ಎಂದರು.ಧರ್ಮಸ್ಥಳ ಸರಣಿ ಕೊಲೆ ಆರೋಪ ಕುರಿತು…

Read More

ನಾನು ಯಾವತ್ತೂ ಸಿಎಂ ಹುದ್ದೆ ಕ್ಲೇಮ್ ಮಾಡಿಯೇ ಇಲ್ಲ : ಸಚಿವ ಸತೀಶ ಜಾರಕಿಹೊಳಿ

ಸಪ್ತ ಸಾಗರ ವಾರ್ತೆ ವಿಜಯಪುರ, ಜು.22:ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದರು.ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಸಿಎಂ ಜಾಗ ಖಾಲಿ ಇಲ್ಲ‌ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ.ಅವರೇ ಹೊಂದಾಣಿಕೆ ಆಗಿದ್ದಾರೆ. ನಾವು ಹೇಳುವುದು ಏನು ಇಲ್ಲ ಎಂದು ತಿಳಿಸಿದರು.ಸತೀಶ ಅಭಿಮಾನಿಗಳಿಂದ ಸಿಎಂ ಘೋಷಣೆ ವಿಚಾರವಾಗಿ…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More