ಆಗಸ್ಟ್ 5ರಿಂದ 20ರವರೆಗೆ 10 ಕೋಟಿ ಜನರಿಂದ ವ್ಯಸನಮುಕ್ತ ಪ್ರತಿಜ್ಞೆ ಅಭಿಯಾನ: ರಾಜಯೋಗಿನಿ ಬಿ.ಕೆ. ಸರೋಜಾ
ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಮಾದಕ ವ್ಯಸನವು ವ್ಯಕ್ತಿಯ ಜೀವನವಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಭವಿಷ್ಯವನ್ನೂ ಹಾಳು ಮಾಡುವ ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಪ್ರತಿಯೊಬ್ಬರೂ ವ್ಯಸನಮುಕ್ತ ಜೀವನಕ್ಕೆ ಸಂಕಲ್ಪ ಮಾಡಬೇಕು ಎಂದು ವಿಜಯಪುರ ಬ್ರಹ್ಮಕುಮಾರಿ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿ.ಕೆ. ಸರೋಜಾ ಕರೆ ನೀಡಿದರು.ತಿಕೋಟಾ ತಾಲ್ಲೂಕಿನ ಲೋಹಗಾಂವ ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಮದಲ್ಲಿ ಗುರುಪೂರ್ಣಿಮೆ ಹಾಗೂ ವ್ಯಸನಮುಕ್ತ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಲೋಹಗಾಂವ ಹಿರೇಮಠದ ಅಲ್ಲಮಪ್ರಭು ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ…


