ರೋಮಿಯೋಗಳ ಕಾಟ, ಲವ್ ಜಿಹಾದ್ ನಂತಹ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆಗೆ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 20:ರೌಡಿ ರೋಡ್ ರೋಮಿಯೋಗಳ ಕಾಟ, ಲವ್ ಜಿಹಾದ್ ನಂತಹ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆಗೆ ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಅವರು ಆಗ್ರಹಿಸಿದ್ದಾರೆ.ಜಿಲ್ಲಾ ಪೊಲೀಸ್ ಇಲಾಖೆ ಅತ್ಯುತ್ತಮ ಕಾರ್ಯ ಮಾಡುತ್ತಿದ್ದು, ಈಗಾಗಲೇ ದರೋಡೆಕೋರರು, ಕಳ್ಳರು, ಸಮಾಜಘಾತಕರು ಮೇಲೆ ಕ್ರಮ ಕೈಗೊಳ್ಳುವದರ ಜೊತೆಗೆ ಜನತೆಗೆ ಕಿರಿಕಿರಿ ಉಂಟುಮಾಡಿ ಶಬ್ದ ಮಾಲಿನ್ಯ ಮಾಡುತ್ತಿರುವ ವಾಹನಗಳ ಸೈಲೆನ್ಸರ್ ಗಳನ್ನು ವಶಪಡಿಸಿಕೊಂಡು, ನಾಶಪಡಿಸಿ ಕೇಸ್ ದಾಖಲಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನೈತಿಕ ಚಟುವಟಿಕೆ ಮಾಡುವವರು, ಮದ್ಯಪಾನ…

Read More

ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ರೈತರ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ತಾಲೂಕಿನ ಬೊಮ್ಮನಹಳ್ಳಿ, ಗುಣಕಿ, ಮಿಂಚನಾಳ, ಡೋಮನಾಳ, ಕನ್ನಾಳ ಗ್ರಾಮದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು ಸಾಕಾಗಿದೆ ೨ ವರ್ಷಗಳ ಹಿಂದೆ ಕನ್ನೂರಿನಲ್ಲಿ ಉದ್ಘಾಟನೆ ಆಗಬೇಕಿರುವ ೧೧೦ ಕೆ.ವಿ ಕೆ.ಇ.ಬಿ ಇನ್ನು ಉದ್ಘಾಟನೆ ಮಾಡದೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಈ ಬಾಗದ ಸಾರ್ಚಜನಿಕರಿಗೆ, ರೈತರಿಗೆ , ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.ಕನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಗ್ರಾಮೀಣವಲಯದ ಸಹಾಯಕ ಕಾರ್ಯನಿರ್ವಾಹಕ…

Read More

ರಾಜ್ಯದಲ್ಲಿ ದಲಿತ ವ್ಯಕ್ತಿ ಸಿಎಂ ಆಗಬೇಕೆಂಬ ಧ್ವನಿ ನಿರಂತರವಾಗಿ ಎತ್ತುತ್ತೇನೆ- ಸಂಸದ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ರಾಜ್ಯದಲ್ಲಿ ದಲಿತ ಸಮಾಜಕ್ಕೆ ಸೇರಿದ ವ್ಯಕ್ತಿ ಸಿಎಂ ಆಗಬೇಕು ಎಂಬ ವಿಚಾರದ ಬಗ್ಗೆ ನಾನು ಕೊನೆಯವರೆಗೂ ಧ್ವನಿ ಎತ್ತುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿಜಯೇಂದ್ರ ಸೇರಿದಂತೆ ಯಾರೇ ಸಿಎಂ ಆದರೂ ನನಗೆ ಅಸಮಾಧಾನವಿಲ್ಲ.ಆದರೆ ದಲಿತರು ಸಿಎಂ ಆಗಬೇಕೆಂಬ ಧ್ವನಿಯನ್ನು ಕೊನೆಯವರೆಗೂ ಎತ್ತುತ್ತೇನೆ ಎಂದರು.ನಾನೇ ಸಿಎಂ ಆಗಬೇಕೆಂಬುದಿಲ್ಲ. ಯಾರೇ ದಲಿತ ನಾಯಕ ಸಿಎಂ ಆಗಲಿ ಎಂಬುದು ನನ್ನ ಆಸೆ. ದಲಿತರನ್ನು ಸಿಎಂ ಮಾಡುತ್ತಾರೋ…

Read More

ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಲು ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26 :ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ವಿಜಯಪುರ ನಗರ ಘಟಕ ಕುರುಬರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಸಂತೋಷದ ಸಂಗತಿ. ಆದರೆ ಸ್ವಾತಂತ್ರ್ಯ ಸಮರವನ್ನು ಸಾರಿದ ಕೀರ್ತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಅವರ ಎಡಭಾಗದಲ್ಲಿ ಪ್ರತಿಷ್ಠಾಪನೆ…

Read More

ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಪ್ರಸ್ತಾವನೆ ಕೈಬಿಡಿ: ಹೋರಾಟ ಸಮಿತಿ ಒತ್ತಾಯ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.ಸರಕಾರಿ ವೈದ್ಯಕೀಯ ಕಾಲೇಜು…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More

ಕುರಿಗಾರರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ಅರಣ್ಯ ಇಲಾಖೆಯಿಂದ ಕುರಿಗಾರರ ಮೇಲೆ ಆಗುತ್ತಿರುವ ಕಿರುಕುಳ, ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕುರಿಗಾರರ ಸಂಘದ ಅಧ್ಯಕ್ಷ ಬೀರಪ್ಪ ಜುಮನಾಳ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಕೆಲವು ಕಡೆ ಅರಣ್ಯ ಪ್ರದೇಶಗಳಲ್ಲಿ ವಿನಾಕಾರಣ ಕುರಿಗಾರರ ಮೇಲೆ ದಬ್ಬಾಳಿಕೆ, ಬಲತ್ಕಾರ ನಡೆದಿರುವುದು ಕಂಡುಬರುತ್ತದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸರ್ಕಾರದ ನೀತಿ ನಿಯಮಗಳ ಹೊರತುಪಡಿಸಿ ನಮ್ಮ ಕುರಿಗಾರರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು ಎಂದು ಸೂಕ್ತ ತಿಳುವಳಿಕೆ ನೀಡಬೇಕೆಂದು ಅವರು ಕೇಳಿಕೊಂಡಿದ್ದಾರೆ.ಕುರಿಗಾರರು ಅನಕ್ಷರಸ್ಥರು, ಮುಗ್ಧರು…

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ

ಸಪ್ತಸಾಗರ, ವಾರ್ತೆ, ವಿಜಯಪುರ, ಆ. 13 :ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆ ಮುಖಂಡರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ನಂತರ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪ್ರಮುಖರಾದ ಶಿವಾನಂದ ದೇಸಾಯಿ, ಅಪ್ಪುಗೌಡ ಪಾಟೀಲ್(ಮನಗೂಳಿ),…

Read More