ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ
ಸಪ್ತಸಾಗರ ವಾರ್ತೆ ವಿಜಯಪುರ, ಫೆ.8:ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಶನಿವಾರ ಸಂಜೆ ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶಿಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿಜಯಪುರ ನಗರದ ನವಬಾಗ ಪ್ರದೇಶದ ಮುಖ್ಯ ರಸ್ತೆಯನ್ನು ನಿರ್ಮಿತಿ ಕೇಂದ್ರದಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಿ.ಸಿ ರಸ್ತೆಯ ಕಾಮಗಾರಿ ಪರಿಶಿಲನೆ ನಡೆಸಿದರು. ಇದರೊಂದಿಗೆ ನವಬಾಗ ಪ್ರದೇಶದಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ…


