ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರ ಹಮ್ಮಿಕೊಳ್ಳಿ : ಶಿವಪ್ಪಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ಸಿಂದಗಿ, ಏ. 19: ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಹೇಳಿದರು.ನಗರದಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ತಾಲೂಕಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಮತ್ತು ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವ, ತಾಲೂಕಿನಲ್ಲಿ ಕಬ್ಬಿನ ಕ್ಷೇತ್ರ ಹೆಚ್ಚಾಗಿದ್ದು ಕಬ್ಬಿನ ಬೆಳೆಗೆ ನೀರು ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ…

Read More

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ: ಜಿಪಂ ಉಪಕಾರ್ಯದರ್ಶಿ ಪ್ರಕಾಶ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15 :ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ‌ ಪ್ರಕಾಶ ವಡ್ಡರ ಆವರು ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು.ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು…

Read More

ತಾಳಿಕೋಟೆ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.11:ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡೇಕನೂರ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿದ ಅವರು, ಅಂಗನವಾಡಿ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯ ಗುಣಮಟ್ಟ ಹೆಚ್ಚಿಸಿ ಕಲಿಕೆಗೆ ಆದ್ಯತೆ ನೀಡಬೇಕು. ಅಡುಗೆ ಕೊಠಡಿ ಸ್ವಚ್ಚತೆಗೆ ನಿರಂತರ ಶುಚಿತ್ವ ಕಾಪಾಡಬೇಕು. ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ,…

Read More

ಸಮಾಜದ ಅಭಿವೃದ್ಧಿಗೆ ಸಂಘದ ಸದಸ್ಯರು ಶ್ರಮಿಸಬೇಕು : ಸುಮಿತ್ರಾ ಮಾನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 11 : ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಂಘದ ಸದಸ್ಯರು ನಗರದ ಖಾಸಗಿ ಹೊಟೇಲ್ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾಗಿ‌ ಮಹಿಳಾ ದಿನಾಚರಣೆ ಆಚರಿಸಿದರು.ಪಿಎಸ್ ಐ ರೇಣುಕಾ ದಿನ್ನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.ವಿಶ್ರಾಂತ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಸಂಘದ ಸಂಸ್ಥಾಪಕಿ ಸುಮಿತ್ರಾಮಾನೆ ಮಾತನಾಡಿ, ರಾಜಮಾತೆ ಅಹಲ್ಯಾಬಾಯಿ ಹೊಳಕರ್ 12 ಜ್ಯೋತಿರ್ಲಿಂಗಗಳನ್ನು ಜೀರ್ಣೋದ್ಧಾರ ಮಾಡಿ ಹಲವಾರು ದೇವಾಲಯಗಳನ್ನು ಅಭಿವೃದ್ಧಿಗೊಳಿಸಿ ಜನಪರ ಕಾರ್ಯಗಳನ್ನು ಮಾಡಿದ್ದಾರೆ ಅಂತವರ ಹೆಸರಿನಲ್ಲಿ ವಿಜಯಪುರ…

Read More

ವಿಜಯಪುರದ ಸಂಚಾರ ವ್ಯವಸ್ಥೆಗೆ ಬೇಕಿದೆ ಮೇಜರ್ ಸರ್ಜರಿ:ಓಬೇರಾಯನ ಕಾಲದ ಸಂಚಾರಿ ವ್ಯವಸ್ಥೆಗೆ ಗುಡ್ ಬೈ ಯಾವಾಗ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ವಿಶ್ವಖ್ಯಾತ ಗೋಳಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ತುಕ್ಕು ಹಿಡಿದಿದ್ದು, ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ಕೂಡಲೇ ಮೇಜರ್ ಸರ್ಜರಿ ಬೇಕಿದೆ.ಹೌದು. ಕಳೆದ ಹತ್ತಾರು ವರ್ಷಗಳಿಂದ ವಿಜಯಪುರ ಮಹಾನಗರದಲ್ಲಿ ತುಕ್ಕು ಹಿಡಿದ ಸಂಚಾರ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ನಗರದಲ್ಲಿ ಸಂಚರಿಸಲು ತುಂಬಾ ಕಷ್ಟವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಹಾನಗರದಲ್ಲಿ ಜನಸಂಖ್ಯೆಯ ಜೊತೆ ಜೊತೆಯಲ್ಲಿಯೇ ವಾಹನಗಳ ಸಂಖ್ಯೆಯು ದ್ವಿಗುಣವಾಗುತ್ತಿದೆ. ಪಾದಚಾರಿಗಳಷ್ಟೇ…

Read More

ಗ್ರಾಮಗಳ ಅಭಿವೃದ್ಧಿಗಾಗಿ ಹೆಮ್ಮೆಯಿಂದ ಕೆಲಸ ನಿರ್ವಹಿಸಿ: ಕಲ್ಲಪ್ಪ ನಂದರಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 21:ಗ್ರಾಮಗಳ ಅಭಿವೃದ್ಧಿಗಾಗಿ ಹೆಮ್ಮೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಹೇಳಿದರು.ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮ ಪಂಚಾಯತಿ ಅಡಿ ಹಮ್ಮಿಕೊಂಡ ರೋಜಗಾರ ದಿವಸ ಕಾರ್ಯಕ್ರಮದಲ್ಲಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗವನ್ನು ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸುವುದು. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡಜನರ ಜೀವನೋಪಾಯದ ಮಟ್ಟ ಸುಧಾರಿಸುವುದು, ರಾಷ್ಟ್ರೀಯ ಗ್ರಾಮೀಣ…

Read More

ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿ-ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್,ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜ. 1 ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More

ಉತ್ತರ ಕರ್ನಾಟಕ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೇಲ್ವೆ ಸಚಿವರ ಜೊತೆಗೆ ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ರಾಜ್ಯದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ. ಗದ್ದಿಗೌಡರ ಅವರು ಸೋಮವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕುರಿತು…

Read More