ಜಿಲ್ಲೆಯ ಸಮಗ್ರ ನೀರಾವರಿಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಸಿಎಂಗೆ ಮನವಿ ಸಲ್ಲಿಕೆ – ಬಾಕಿ ನೀರಾವರಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಲು ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ ಹಾಗೂ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.ಬಳಿಕ ರೈತರು ಒಂದು…

Read More

ಜಿಲ್ಲೆಯಲ್ಲಿ 19,07,583 ಗಣತಿ ನಮೂನೆ ವಿತರಣೆ.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಸಪ್ತಸಾಗರ ವಾರ್ತೆ ವಿಜಯಪುರ: ಜು. 14 ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ 30 ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಜುಲೈ 13 ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಅನುಸಾರ 19,07,583 ಗಣತಿ ನಮೂನೆ ವಿತರಿಸಲಾಗಿದೆ. ಅವುಗಳಲ್ಲಿ 7,27,933 ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.ಮತದಾರರ…

Read More

ವಿಜಯಪುರ ಜಿಲ್ಲೆಗೆ ಕೇಂದ್ರದಿಂದ 153 ಕೋಟಿ ರೂ. ಮಂಜೂರು-ಸಂಸದ ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 27:ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ವಿಜಯಪುರಕ್ಕೆ ವಿವಿಧ ನಿರ್ಣಾಯಕ ಮೂಲಸೌಕರ್ಯ ಯೋಜನೆಗಳಿಗಾಗಿ ಆರ್ ಐಡಿ ನಬಾರ್ಡ್ ನಡಿ 153 ಕೋಟಿ ರೂ. ಮಂಜೂರು ಮಾಡಿದೆ ಎಂದು ಸಂಸದರಾರದ ರಮೇಶ ಜಿಗಜಿಣಗಿ ಅವರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿಗಾಗಿ ಕಡಿಮೆ ವೆಚ್ಚದ ಸಾಲ ಸಹಾಯವಾಗಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ ವಿಜಯಪುರ ಜಿಲ್ಲೆಗೆ 153.5 ಕೋಟಿ…

Read More

ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಪೊಲೀಸರು ನೊಂದವರ ಭರವಸೆಯ ಆಶಾಕಿರಣ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು…

Read More

ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More

ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅರ್ಥಪೂರ್ಣ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ,ಗೌರವ ಸಲ್ಲಿಸಿದರು. ಭವ್ಯ ಮೆರವಣಿಗೆ:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯು ವಿವಿಧ ಕಲಾ…

Read More

ಕೇಂದ್ರ ತಂಡದಿಂದ ಜಿಲ್ಲೆಯ ನೈಸರ್ಗಿಕ ವಿಕೋಪ- ಬೆಳೆಹಾನಿ ಸಮೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.12: ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಜಂಟಿ ನಿರ್ದೇಶಕ ಮಹೇಶಕುಮಾರ, ಇಸ್ರೋ ಬಾಹ್ಯಾಕಾಶ ಇಲಾಖೆಯ ಆಕಾಶ ಮೋಹನ್, ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಹೊನ್ನಂಬ ಅವರನ್ನೊಳಗೊಂಡ ತಂಡ ವಿಜಯಪುರ ಜಿಲ್ಲೆಗೆ ಆಗಮಿಸಿ ಮುಂಗಾರು ಹಂಗಾಮಿನ ಬೆಳೆ ಹಾನಿ ಹಾಗೂ ಪ್ರವಾಹ-ನೈಸರ್ಗಿಕ ವಿಕೋಪದಿಂದ ಜನ-ಜಾನುವಾರು ಹಾನಿಗಳ ಕುರಿತು ಪರಿಶೀಲನೆ ನಡೆಸಿತು.ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿದ ತಂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ತಂಡ, ಜಿಲ್ಲೆಯಲ್ಲಿ ಮುಂಗಾರಿನಲ್ಲಿ 3,14,578 ಹೆಕ್ಟೇರ್ ಕೃಷಿ…

Read More

ಜಿಲ್ಲಾ ಕಾನಿಪ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಜರುಗಿದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಯಡಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕಾಂತ ಮೆಂಡೆಗಾರ ಅವರನ್ನು ಹಾಗೂ ಕರುನಾಡು ಪ್ರಭ ಪತ್ರಿಕೆಯ ಸಂಸ್ಥಾಪಕ ಶರಣು ಮಸಳಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ, ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ನಾಗಠಾಣ ಮತಕ್ಷೇತ್ರದ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More

ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.10:ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ ಅವರು ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

Read More