ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಮಹಾ ಪರಿ ನಿರ್ವಾಣ ದಿನ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.೬: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರವರ, ೬೯ನೇ ಮಹಾಪರಿನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲಹಮೀದ ಮುಶ್ರೀಫ್ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರವರು ಆಧುನಿಕ ಭಾರತವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿ ಪ್ರಮುಖ ನಾಯಕರಾಗಿದ್ದರು. ಅವರು ನ್ಯಾಯಶಾಸ್ತ್ರಜ್ಞ ಅರ್ಥಶಾಸ್ತ್ರಜ್ಞ, ಸಾಮಾಜಿಕ ಸುಧಾರಕ ರಾಜಕಾರಣಿಯಾಗಿದ್ದರು. ಭಾರತ ಸಂವಿಧಾನವನ್ನು ರಚಿಸಿದ ಸಮಿತಿಯ ಅಧ್ಯಕ್ಷರಾಗಿ ಡಾ. ಅಂಬೇಡ್ಕರರವರು ಎಲ್ಲ ದೇಶದ ನಾಗರಿಕರಿಗೆ ನ್ಯಾಯ, ಸಮಾನತೆ ಮತ್ತು ಘನತೆಯನ್ನು ತರುವಲ್ಲಿ ನಿರಂತರವಾಗಿ ಶ್ರಮಿಸಿದರು. ಸಂವಿಧಾನ…

Read More

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಮಹಾಪರಿ ನಿರ್ವಾಣ ದಿನ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 69ನೇ ಮಹಾಪರಿ ನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಹಂಗಿಗೂ ಒಳಗಾಗದ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಮಾತು ಕೃತಿ ಭಾಷಣಗಳಿಂದ ಸೂರ್ಯನ ಕಿರಣಗಳಿಗಿಂತಲೂ ಪ್ರಖರವಾಗಿದ್ದು. ಅವರು ಅಂದು ನಡೆದ ಬಂದಂತ ಕಲ್ಲು ಮುಳ್ಳಿನ ದಾರಿ ಇಂದು ನಮಗೆಲ್ಲ ರಾಜ್ಯಮಾರ್ಗವಾಗಿದೆ. ಬಾಬಾ ಸಾಹೇಬ ಅಂಬೇಡ್ಕರ ಅವರು 1939…

Read More

ಡಿ.21 ರಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.2 :ಜಿಲ್ಲೆಯಾದ್ಯಂತ ಡಿಸೆಂಬರ್ 21 ರಿಂದ 24ರವರೆಗೆ ನಾಲ್ಕು ದಿನಗಳವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಿಸೆಂಬರ್ 21ರಂದು ಬೂತ್ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ನಂತರದ ಮೂರು ದಿನ ಮನೆ ಮನೆಗೆ…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More