ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More

ಅ.7ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ.3:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣವರೆಗೆ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10.30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು…

Read More

ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….

Read More

ಸೆ. 26 ರಂದು ವಿಜಯಪುರ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕಿಯರ ಸಂಘ (ರಿ), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಸೆ. 26ರಂದು ವಿಜಯಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

Read More

ಸಾಮಾಜಿಕ, ಶೈಕ್ಷಣಿಕ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಮನೆ-ಮನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು. ಸೋಮವಾರ ನಗರದ ಕೀರ್ತಿನಗರದಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಮೀಕ್ಷಾದಾರರು ತಮ್ಮ ಮನೆಗೆ…

Read More

ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More

ಅಸ್ಮಿತಾ ಖೇಲೋ ಇಂಡಿಯಾಗೆ ಯೋಗ ತಂಡ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ರಾಜ್ಯ ಮಟ್ಟದ ಅಸ್ಮಿತಾ ಖೋಲೋ ಇಂಡಿಯಾ ಯೋಗಾ ಕ್ರೀಡಾಕೂಟಕ್ಕೆ ತಿಡಗುಂದಿ ಮಾನಸ ಗಂಗೋತ್ರಿ ವಸತಿ ಶಾಲೆ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.ಆ.22ರಂದು ಚಿತ್ರದುರ್ಗದ ಮುರಘಾಮಠದಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಮಾರಿಯಮ್ಮ ಹರಿಜನ, ಭೂಮಿಕಾ ಛಲವಾದಿ, ಕಾವೇರಿ ಢವಳಗಿ, ಹರ್ಷಿತಾ ಹರಿಜನ, ಪ್ರಿಯಾ ಚವ್ಹಾಣ, ವೈಷ್ಣವಿ ರಾಠೋಡ ಆಯ್ಕೆ ಆಗಿದ್ದಾರೆ.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸನಗೌಡ ಹರಾನಾಳ, ಬಸವರಾಜ ಬಾಗೇವಾಡಿ ಉತ್ನಾಳ, ಕೃಷ್ಣ ಭಜಂತ್ರಿ,ಮತ್ತು ಭಾಗ್ಯಶ್ರೀ ಚಲವಾದಿ ಅಭಿನಂದಿಸಿದ್ದಾರೆ.

Read More

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…

Read More

ಸೆ. 13 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್:ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ-ಜಿಲ್ಲಾ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ ವಿಜಯಪುರ, ಆ. 14: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ. ಎ ಅವರು ತಿಳಿಸಿದರು.ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ…

Read More