ಬರ ಘೋಷಣೆಗೆ ಜೆಡಿಎಸ್ ಒತ್ತಾಯ:ರೈತರ ಸಾಲಮನ್ನಾ, ಕಾಲುವೆಗಳಿಗೆ ನೀರು ಹರಿಸದಿದ್ದರೆ ಹೋರಾಟದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಮಳೆ ಕೈಕೊಟ್ಟು ಮುಂಗಾರು ಬೆಳೆ ಸಂಪೂರ್ಣ ನೆಲಕಚ್ಚಿರುವ ಬೆನ್ನಲ್ಲೇ ವಿಜಯಪುರ ಜಿಲ್ಲೆಯಲ್ಲಿ ರೈತರ ಸಂಕಷ್ಟ ತೀವ್ರಗೊಂಡಿದೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರ ಸಾಲ ಮನ್ನಾ ಮಾಡಬೇಕು, ಜಾನುವಾರುಗಳಿಗೆ ಮೇವು ಒದಗಿಸಬೇಕು ಹಾಗೂ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಡಿಗೇರಿ ಸರ್ಕಾರವನ್ನು ಒತ್ತಾಯಿಸಿದರು.ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರು ಹಾಗೂ ತಾಲೂಕು ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ರೈತರು ಸಂಕಷ್ಟದಲ್ಲಿರುವಾಗ…

Read More