ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.16: ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ…

Read More

ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮಾದರಿ:ಡಾ. ವಿವೇಕ ಬೆನೆಗಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ…

Read More

ನಿರ್ಲಕ್ಷಿತರಿಗೆ ಕಾಕಾ ಕಾರಖಾನೀಸರಿಂದ ಶಿಕ್ಷಣ ದಾಸೋಹ – ಬಿ.ಆರ್.ಬನಸೋಡೆ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.30: ನಿರ್ಲಕ್ಷಿತಗೊಳಗಾದವರನ್ನು ಸುಶಿಕ್ಷಿತರನ್ನಾಗಿಸಿದ ಶ್ರೇಯಸ್ಸು ಕಾಕಾ ಕಾರಖಾನೀಸರಿಗೆ ಸಲ್ಲುತ್ತದೆ. ಎಂದು ಜಾತಿಭೇದ, ಲಿಂಗಭೇದ ಮತ್ತು ವರ್ಣಭೇದ ಹೋಗಲಾಡಿಸಲು ಅಹರ್ನಿಶಿ ದುಡಿದವರು. ಅವರು ಕೇವಲ ಸಹಾನುಭೂತಿ ತೋರದೇ, ಅವರಲ್ಲಿ ಒಂದಾಗಿ ಅನುಭೂತಿಯನ್ನು ತೋರಿದ ಮಹಾನ್ ಧೀಮಂತರು ಎಂದು ಬಣ್ಣಿಸಿದರು.ಬ್ರಾಹ್ಮಣನಾಗಿದ್ದರೂ ನಾನು ಎಂದೆಂದೂ ಹರಿಜನನಾಗಿರುತ್ತೇನೆ ಎನ್ನುವ ಮೂಲಕ ಅದರಂತೆ ಬದುಕು ಸಾಗಿಸಿದವರು. ಸಮಾನತೆ ತರಲು ನಿರಂತರ ಹೋರಾಡಿದ ಹುಟ್ಟು ಸನ್ಯಾಸಿ, ದೇಶಪ್ರೇಮಿ, ಶತಾಯುಷಿ, ಸಾಬರಮತಿ ಆಶ್ರಮದಲ್ಲಿದ್ದು ಅಪ್ಪಟ ಗಾಂಧಿ ಅನುಯಾಯಿಯಾಗಿ ಪದ್ಮಶ್ರೀ ಕಾಕಾ ಕಾರಖಾನೀಸರು ಜನಾನುರಾಗಿಯಾಗಿದ್ದರು…

Read More

ಪಾಲಕರು ಚಾರಿತ್ರ್ಯದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು-ಹಾರಿಕ ಮಂಜುನಾಥ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27: ಈಗಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸ್ವಾಮಿ ವಿವೇಕಾನಂದರಂತಹ ಚಾರಿತ್ರ್ಯದ ಶಿಕ್ಷಣಕ್ಕೆ ಪಾಲಕರು ಮೊದಲಾದ್ಯತೆ ನೀಡಬೇಕು. ಪಠ್ಯ ಪುಸ್ತಕಗಳು ಮಕ್ಕಳನ್ನು ಶಿಕ್ಷಣವಂತರಾಗಿ ಮಾತ್ರ ಮಾಡುತ್ತವೆ. ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಧಾರೆ ಎರೆಯಬೇಕು ಎಂದು ಬೆಂಗಳೂರಿನ ಯುವ ವಾಗ್ಮಿ ಕುಮಾರಿ ಹಾರಿಕ ಮಂಜುನಾಥ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿ…

Read More

ಅಜಾದ್ ಅವರ ಕೊಡುಗೆ ಉನ್ನತ ಶಿಕ್ಷಣಕ್ಕೆ ಅಮೂಲ್ಯ: ಡಾ. ರಾಮು ಸಜ್ಜನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಮೌಲಾನಾ ಅಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ಮೌಲಾನಾ ಅಜಾದ್ ಅವರ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಶಿಕ್ಷಣ…

Read More

ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ….

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More

ಸಾಮಾಜಿಕ, ಶೈಕ್ಷಣಿಕ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಮನೆ-ಮನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು. ಸೋಮವಾರ ನಗರದ ಕೀರ್ತಿನಗರದಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಮೀಕ್ಷಾದಾರರು ತಮ್ಮ ಮನೆಗೆ…

Read More

ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:

ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….

Read More