ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಶಿಕ್ಷಣವೇ ಅಸ್ತ್ರ- ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಇಂಡಿ, 12:ಮಕ್ಕಳು ದೇಶದ ಭವಿಷ್ಯದ ಆಸ್ತಿ. ಮಕ್ಕಳ ಕೈಯಲ್ಲಿ ಪುಸ್ತಕವಿರಬೇಕು, ದುಡಿಮೆಯ ಆಯುಧ ಅಲ್ಲ. ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನವನ್ನು ಉದ್ಧೇಶಿಸಿ ಅವರು ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯ, ಆರೋಗ್ಯ, ಶಿಕ್ಷಣ ಕಸಿದುಕೊಳ್ಳುವ ಸಾಮಾಜಿಕ ಪಿಡುಗು. ಅದು ದೇಶದ ಭವಿಷ್ಯಕ್ಕೆ ಮಾರಕ….


