ವಿದ್ಯುತ್ ಚಿತಾಗಾರ ನಿರ್ಮಾಣ: ಶಾಸಕ ಯತ್ನಾಳ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 20:ನಗರದ ವಾರ್ಡ್ ನಂ.8 ರಲ್ಲಿ ಬರುವ ಚಾಲುಕ್ಯ ನಗರ ಪೂರ್ವ ಭಾಗದ ದೇವಗಿರಕರ ಸ್ಮಶಾನದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಂಜೂರಿಸಲಾದ ರೂ.4 ಕೋಟಿ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಸಕರಾತ್ಮಕವಾಗಿ ಸ್ಪಂದಿಸಿದರು. ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಅಶೋಕ…

Read More