ಬುರಣಾಪುರದ 5 ಎಕರೆ ಜಮೀನಿನಲ್ಲಿ ನೀರು, ವಿದ್ಯುತ್, ಹಕ್ಕುಪತ್ರ ಸೇರಿ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಸ್ವರಾಜ್ಯ ಸೇನೆ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿಗಾಗಿ ಬುರಣಾಪುರ ಗ್ರಾಮದ ಸರ್ವೆ ನಂ. 67/1ರಲ್ಲಿ 5 ಎಕರೆ ಜಮೀನನ್ನು ಮಂಜೂರು ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಸ್ವಾಗತಿಸಿದೆ.ಆದರೆ, ಜಮೀನು ಮಂಜೂರಾದರೂ ಪುನರ್ವಸತಿ ಕಾಮಗಾರಿ ವಿಳಂಬವಾಗದಂತೆ ತಕ್ಷಣವೇ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಮನವಿಯಲ್ಲಿ, ಪುನರ್ವಸತಿ ಪ್ರದೇಶದಲ್ಲಿ ನಿವಾಸಿಗಳು ಕೂಡಲೇ ನೆಲೆಸಲು ಅಗತ್ಯವಾದ ಕುಡಿಯುವ ನೀರು, ವಿದ್ಯುತ್,…

Read More

ನೀರಾವರಿಗೆ ನೀಡಿದಷ್ಟೇ ವಿದ್ಯುತ್‌ಗೂ ಪ್ರಾಮುಖ್ಯತೆ: ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣ- ಸಚಿವ ಎಂ.ಬಿ. ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ. ಜಲಕ್ರಾಂತಿಯೊಂದಿಗೆ ಇಂಧನ ಕ್ರಾಂತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಹೇಳಿದರು.ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.ನೀರಿಗೆ ಆದ್ಯತೆ ನೀಡಿದ ಮಾದರಿಯಲ್ಲೇ ರೈತರಿಗೆ ವಿದ್ಯುತ್…

Read More

ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ‌ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…

Read More

ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ರೈತರ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ತಾಲೂಕಿನ ಬೊಮ್ಮನಹಳ್ಳಿ, ಗುಣಕಿ, ಮಿಂಚನಾಳ, ಡೋಮನಾಳ, ಕನ್ನಾಳ ಗ್ರಾಮದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು ಸಾಕಾಗಿದೆ ೨ ವರ್ಷಗಳ ಹಿಂದೆ ಕನ್ನೂರಿನಲ್ಲಿ ಉದ್ಘಾಟನೆ ಆಗಬೇಕಿರುವ ೧೧೦ ಕೆ.ವಿ ಕೆ.ಇ.ಬಿ ಇನ್ನು ಉದ್ಘಾಟನೆ ಮಾಡದೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಈ ಬಾಗದ ಸಾರ್ಚಜನಿಕರಿಗೆ, ರೈತರಿಗೆ , ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.ಕನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಗ್ರಾಮೀಣವಲಯದ ಸಹಾಯಕ ಕಾರ್ಯನಿರ್ವಾಹಕ…

Read More