ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ 

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.15: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ…

Read More