ಯುವಕರಿಗೆ ವೃತ್ತಿಪರ ಕ್ರೀಡೆಗೆ ಪ್ರೋತ್ಸಾಹ: ಸುನೀಲಗೌಡ ಪಾಟೀಲ
ಬಬಲೇಶ್ವರ ಪ್ರೀಮಿಯರ್ ಲೀಗ್-2 ಸಮಾರೋಪ; ಗೇಮ್ ಚೇಂಜರ್ ಜೈನಾಪುರ ಚಾಂಪಿಯನ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಯುವಕರು ವೃತ್ತಿಪರ ಕ್ರೀಡಾಪಟುಗಳಾಗಿ ಬೆಳೆಯಲು ಅಗತ್ಯ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರದಲ್ಲಿ ದಿ. ಶ್ರೀ ಬಿ.ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಹಾಗೂ ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ…


