
ಪರೀಕ್ಷೆಗಳಿಗೆ ಭಯ ಬೇಡ, ಸಿದ್ಧತೆ ಇರಲಿ-ಡಿಸಿ ಡಾ. ಆನಂದ
ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾಗು ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ…