ವಿವೇಕ ವಿದ್ಯಾರ್ಥಿ ಪರೀಕ್ಷೆ : ರಾಜ್ಯಕ್ಕೆ ೧೦ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ,ಜ. 15: ರಾಮಕೃಷ್ಣ-ವಿವೇಕಾನಂದ ಆಶ್ರಮ ತುಮಕೂರು ಇವರು ನಡೆಸಿದ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತಾದ ರಾಜ್ಯ ಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಕುಮಾರ ಜೀವನ ಕಾಮಗೊಂಡ, ಈ ವಿದ್ಯಾರ್ಥಿಯು ಉತ್ತಮ ಅಂಕಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಜ. 11 ರಂದು ತುಮಕೂರಿನಲ್ಲಿ ರಾಮಕೃಷ್ಣ-ವಿವೇಕಾನಂದ ಆಶ್ರಮದ ವತಿಯಿಂದ ನಡೆದ ಸಮಾರಂಭದಲ್ಲಿ ಸನ್ಮಾನಿತನಾಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಎಕ್ಸಲಂಟ್ ಸಂಸ್ಥೆಯ ಚೇರಮನ್ ಬಸವರಾಜ…

Read More

ಪರೀಕ್ಷೆಗಳಿಗೆ ಭಯ ಬೇಡ, ಸಿದ್ಧತೆ ಇರಲಿ-ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ‌ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾಗು ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More