ದಾಸ ಸಾಹಿತ್ಯದಲ್ಲಿ ಶ್ರೇಷ್ಠ ಜೀವನ ಮೌಲ್ಯಗಳಿವೆ-ಸಾಹಿತಿ ಪ್ರೊ. ಎ. ಎಚ್. ಕೊಳಮಲಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 11: ಕನ್ನಡ ಸಾಹಿತ್ಯದ ಪ್ರಮುಖ ಘಟ್ಟವಾಗಿರುವ ದಾಸ ಸಾಹಿತ್ಯ ಹಲವಾರು ಶ್ರೇಷ್ಠವಾದ ಜೀವನ ಮೌಲ್ಯಗಳನ್ನು ಹೊಂದಿ ಮಾರ್ಗದರ್ಶನ ಮಾಡುತ್ತಾ ಹೋಗುತ್ತದೆ. ಕನಕದಾಸರು ಪುರಂದರದಾಸರು ಈ ಸಾಹಿತ್ಯದ ಶ್ರೇಷ್ಠರಾಗಿದ್ದು ಅವರ ಕೀರ್ತನೆಗಳು ಬದುಕಿನ ದಾರಿಗೆ ದೀಪಗಳಾಗಿವೆ ಎಂದು ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ ಪ್ರೊ. ಎ. ಎಚ್. ಕೊಳಮಲಿ ಇಂದಿಲ್ಲಿ ಅಭಿಪ್ರಾಯಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡ 550 ನೇ ಮಹಾ ಸತ್ಸಂಗ…


