ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರ ಹಮ್ಮಿಕೊಳ್ಳಿ : ಶಿವಪ್ಪಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ಸಿಂದಗಿ, ಏ. 19: ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಹೇಳಿದರು.ನಗರದಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ತಾಲೂಕಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಮತ್ತು ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವ, ತಾಲೂಕಿನಲ್ಲಿ ಕಬ್ಬಿನ ಕ್ಷೇತ್ರ ಹೆಚ್ಚಾಗಿದ್ದು ಕಬ್ಬಿನ ಬೆಳೆಗೆ ನೀರು ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ…

Read More

ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More

ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ರೈತರ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ತಾಲೂಕಿನ ಬೊಮ್ಮನಹಳ್ಳಿ, ಗುಣಕಿ, ಮಿಂಚನಾಳ, ಡೋಮನಾಳ, ಕನ್ನಾಳ ಗ್ರಾಮದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು ಸಾಕಾಗಿದೆ ೨ ವರ್ಷಗಳ ಹಿಂದೆ ಕನ್ನೂರಿನಲ್ಲಿ ಉದ್ಘಾಟನೆ ಆಗಬೇಕಿರುವ ೧೧೦ ಕೆ.ವಿ ಕೆ.ಇ.ಬಿ ಇನ್ನು ಉದ್ಘಾಟನೆ ಮಾಡದೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಈ ಬಾಗದ ಸಾರ್ಚಜನಿಕರಿಗೆ, ರೈತರಿಗೆ , ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.ಕನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಗ್ರಾಮೀಣವಲಯದ ಸಹಾಯಕ ಕಾರ್ಯನಿರ್ವಾಹಕ…

Read More

ದೇಶಕ್ಕೆ ರೈತ ಹಿತರಕ್ಷಿಸುವ ಪ್ರಧಾನಿ ಬೇಕಿದೆ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 4: ದೇಶಕ್ಕೆ ಪ್ರಸ್ತುತ ಸಂದರ್ಭದಲ್ಲಿ ಬಾಯಿ ಮಾತಿನ ಘೋಷಣೆಗೆ ಸೀಮಿತಕ್ಕಿಂತ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ನೊಂದ ರೈತರ ಕಣ್ಣೀರು ಒರೆಸುವ ಪ್ರಧಾನಿ ಬೇಕಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಶನಿವಾರ ರಾತ್ರಿ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದ ರೈತರು ಕೆಲವೇ ವರ್ಷಗಳ ಹಿಂದೆ 370 ದಿನಕ್ಕೂ ಹೆಚ್ಚು ದಿನ ಹೋರಾಟ…

Read More

ಬೆಳೆ ಪರಿಹಾರ ತಾರತಮ್ಯ ಖಂಡಿಸಿ ರೈತರಿಂದ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9 : ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯಯುತವಾದ ಕ್ರಮಗಳನ್ನು ಅನುಸರಿಸಿರುವುದನ್ನು ಹಾಗೂ ಇನ್ನೂ ಕೆಲ ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡದೇ ಇರುವುದನ್ನು ಖಂಡಿಸಿ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರ ಪರಿಣಾಮ ಸರ್ಕಾರ ರೈತರಿಗೆ ಬೆಳೆ ಪರಿಹಾರ…

Read More

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ರೈತರ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3 :ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲೆಯಲ್ಲಿ ರೈತರು ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ ಮನವಿ ಮಾಡಿಕೊಂಡಿದೆ.ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More