ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More

ಬೆಳಗಾವಿ ಎಪಿಎಂಸಿಗೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಸಚಿವ ಶಿವಾನಂದ ಪಾಟೀಲರಿಗೆ ರೈತರಿಂದ ಸನ್ಮಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 30 :ಬೆಳಗಾವಿ ನಗರದಲ್ಲಿ ಖಾಸಗಿ ಹಿಡಿತದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡ ಕಾರಣ ರೈತರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.ಮಂಗಳವಾರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಚುನ್ನಪ್ಪ ಪೂಜಾರಿ ಬಣ) ಕೊಲ್ಹಾರ ತಾಲೂಕ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ರೈತರು ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ, ಸಿಹಿ…

Read More

ಕೇಸಾಪುರದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ: ರೈತರಿಗೆ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.24:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಜಮೀನಿನಲ್ಲಿ ಬೃಹತ್ ಗಾತ್ರದ ಮೊಸಳೆ ಜಮೀನಿನಲ್ಲಿ ಪತ್ತೆಯಾಗಿದೆ.ಅಶೋಕ ಹಂಗರಗೊಂಡ ಎಂಬುವವರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು,ರೈತರು ಭಯಭೀತರಾಗಿದ್ದಾರೆ.ತೊಗರಿ ಬೆಳೆ ಮಧ್ಯೆ ಮೊಸಳೆ ಅವಿತುಕೊಂಡಿದೆ.ಬೃಹತ್ ಗಾತ್ರದ ಈ ಮೊಸಳೆಯನ್ನು ರೈತರು ಹರ ಸಾಹಸ ಮಾಡಿ ಹಗ್ಗದಿಂದ ಕಟ್ಟಿ ಹಾಕಿ ಸೆರೆ ಹಿಡಿದಿದ್ದಾ.ಅಶೋಕ ಹಗರಗೊಂಡ, ಮುದಕಪ್ಪ ಪೂಜಾರಿ, ಗದ್ದೆಪ್ಪ ಬೋಯಾರ, ಅಕ್ಬರ್ , ರಫೀಕ್ ಹಾಗೂ ಆಸೀಫ್ ತಾಳಿಕೋಟೆ ಎಂಬುವವರು ಸೇರಿಕೊಂಡು ಮೊಸಳೆ ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ…

Read More

ವರ್ಷಪೂರ್ತಿ ಹಣ್ಣು ಬಿಡುವ ಥೈಲ್ಯಾಂಡ್ ಮಾವು ಬೆಳೆದ ಸಾವಯವ ಕೃಷಿಕ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 23 : ಜಿಲ್ಲೆಯ ಪದವೀಧರ ಯುವ ಪ್ರಗತಿಪರ ರೈತರೊಬ್ಬರು ಥೈಲ್ಯಾಂಡ್ ಮೂಲದ ಮಾವು ಬೆಳೆದು ಯಶಸ್ಸು ಸಾಧಿಸಿದ್ದಾರೆ. ಹಣ್ಣಿನ ಸ್ವಾದ ಸವಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರಗತಿಪರ ಯುವರೈತ ನವೀನ್ ನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು.ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದ ಪದವೀಧರ ಯುವ ಪ್ರಗತಿಪರ ರೈತ ನವೀನ ರಾವುತಪ್ಪ ಮಂಗಾನವರ ಮಂಗಳವಾರ ತಾವು ಬೆಳೆದ ಮಾವಿನೊಂದಿಗೆ ಸಚಿವ ಶಿವಾನಂದ ಪಾಟೀಲ ಅವರ ಭೇಟಿಗೆ…

Read More

ಬೆಳೆ ಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಕೈ ಬಿಟ್ಟುಹೋಗದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು….

Read More

ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…

Read More

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More