ಕಾರ್ ಸರ್ವಿಸ್ ಸೆಂಟರ್ ಗೆ ಆಕಸ್ಮಿಕ ಬೆಂಕಿ: 20ಕ್ಕೂ ಹೆಚ್ಚು ಕಾರುಗಳು ಭಸ್ಮ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ.5: ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್.ಎಂ.ಕೆ ಕಾರ್ ಸರ್ವೀಸ್ ಸೆಂಟರ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. 35 ಲಕ್ಷಕ್ಕೂ ಹೆಚ್ಚು ಬಿಡಿ ಭಾಗಗಳು ಭಸ್ಮವಾಗಿ ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಸರ್ವೀಸ್ಗೆ ನಿಲ್ಲಿಸಲಾಗಿದ್ದ ಸುಮಾರು 20 ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.ಹನಮಂತ ಕನಮಡಿ ಎಂಬುವರಿಗೆ ಸೇರಿದ ಈ ಕಾರ್ ಸರ್ವೀಸ್ ಸೆಂಟರ್ನಲ್ಲಿ ರಿಪೇರಿ ಹಾಗೂ ಸರ್ವೀಸ್ಗಾಗಿ ಬಂದಿದ್ದ ವಿವಿಧ ಕಂಪನಿಗಳ ಕಾರುಗಳು…


