ಕಾರ್ ಸರ್ವಿಸ್ ಸೆಂಟರ್ ಗೆ ಆಕಸ್ಮಿಕ ಬೆಂಕಿ: 20ಕ್ಕೂ ಹೆಚ್ಚು ಕಾರುಗಳು ಭಸ್ಮ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.5: ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್.ಎಂ.ಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. 35 ಲಕ್ಷಕ್ಕೂ ಹೆಚ್ಚು ಬಿಡಿ ಭಾಗಗಳು ಭಸ್ಮವಾಗಿ ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಸರ್ವೀಸ್‌ಗೆ ನಿಲ್ಲಿಸಲಾಗಿದ್ದ ಸುಮಾರು 20 ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.ಹನಮಂತ ಕನಮಡಿ ಎಂಬುವರಿಗೆ ಸೇರಿದ ಈ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಹಾಗೂ ಸರ್ವೀಸ್‌ಗಾಗಿ ಬಂದಿದ್ದ ವಿವಿಧ ಕಂಪನಿಗಳ ಕಾರುಗಳು…

Read More

ಕಬ್ಬಿನ ಪಡಕ್ಕೆ ಬೆಂಕಿ:ಓರ್ವ ವ್ಯಕ್ತಿ ಸಜೀವ ದಹನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 16:ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಲ್ಲನಗೌಡ ಬಿರಾದಾರ ಅವರಿಗೆ ಸೇರಿದ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಬ್ಬಿನ ಪಡಕ್ಕೆ ವ್ಯಾಪಿಸಿದೆ. ಆಗ ಇದನ್ನು ಕಂಡ ಮಲ್ಲನಗೌಡ ಅವರು ಬೆಂಕಿ ನಂದಿಸಲು ಹೋದ ವೇಳೆ…

Read More

ಹೋಟೆಲ್ ಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ನಗರ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿನ ಹೋಟೆಲವೊಂದಕ್ಕೆ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದು ಅಪಾರ ಹಾನಿಯಾಗಿದೆ.ಕೃಷ್ಣ ಪ್ಯಾಲೇಸ್ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಘಟನಾಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸುಮಾರು 1 ತಾಸಿಗೂ ಹೆಚ್ಚು ಕಾಲ ಹರ ಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ…

Read More