ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ-ಜಿಲ್ಲಾಧಿಕಾರಿ ಡಾ. ಆನಂದ
ಸಪ್ತಸಾಗರ ವಾರ್ತೆ ವಿಜಯಪುರ ಡಿ.11:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು…


