ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರ- ಡಾ. ಬನುದೇವಿ ಸಂಕಣ್ಣವರ

ಸಪ್ತ ಸಾಗರ ವಾರ್ತೆ, ವಿಜಯಪುರ,ಡಿ.8: ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದ್ದು, ದೇಶದ ಘನತೆ ಸಂಸ್ಕೃತ ಮತ್ತು ಸಂಸ್ಕೃತಿ ಎಂಬ ಎರಡು ಅಸ್ತಿವಾರಗಳಲ್ಲಿ ನಿಂತಿದೆ ಎಂದು ವಿಶ್ರಾಂತ ಉಪನ್ಯಾಸಕಿ ಡಾ. ಬನುದೇವಿ ಸಂಕಣ್ಣವರ ಹೇಳಿದರು.ನಗರದ ಪಿಡಿಜೆ ಹೈಸ್ಕೂಲಿನಲ್ಲಿ ಬೆಂಗಳೂರಿನ ಅಗರಖೇಡ ಪ್ರತಿಷ್ಠಾನ ಮತ್ತು ಇಲ್ಲಿಯ ವಿಜಯಪುರ ಸಂಸ್ಕೃತ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಸಂಸ್ಕೃತ ಸುಭಾಷಿತ ಸ್ಪರ್ಧೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಸಂಸ್ಕೃತವು ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ನಾಸಾ ಸಂಶೋಧನೆಗಳಲ್ಲಿ ಸಂಸ್ಕೃತದ ಉಪಯೋಗದ ಸಾಧ್ಯತೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ….

Read More