“ಬಡವರ ಉಜ್ವಲ ಸಿಲಿಂಡರ್ಗೂ ಕಾಳಸಂತೆ ಕಾಟ!”ಪಾಸ್ಬುಕ್ ವಶಪಡಿಸಿಕೊಂಡು ಅಕ್ರಮ ಬುಕ್ಕಿಂಗ್ ಆರೋಪ; ಗ್ಯಾಸ್ ಏಜೆನ್ಸಿಗಳ ವಿರುದ್ಧ ತನಿಖೆಗೆ ಸರ್ಕಾರದ ಆದೇಶ
ಸಪ್ತಸಾಗರ ವಾರ್ತೆ | ಬೆಂಗಳೂರು. ಆ.10: ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಫಲಾನುಭವಿಗಳಿಗೆ ದೊರೆಯಬೇಕಾದ ಸಬ್ಸಿಡಿ ಸಿಲಿಂಡರ್ಗಳನ್ನೇ ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಭಾರತ್ ಪೆಟ್ರೋಲಿಯಂ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ (HPCL)ಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗಳಲ್ಲಿ…


